<p><strong>ಧಾರವಾಡ</strong>: ‘ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದ ಮಾರ್ಯದೆಗೇಡು ಹತ್ಯೆ ಪ್ರಕರಣದಲ್ಲಿ ತ್ವರಿತವಾಗಿ ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು. ಕಾನೂನು ಸಚಿವ, ಗೃಹಸಚಿವರೊಂದಿಗೆ ಚರ್ಚಿಸಿ ಇಲ್ಲಿನ ವಿಶೇಷ ಕೋರ್ಟ್ನಲ್ಲಿ ತ್ವರಿತಗತಿ ಕೋರ್ಟ್ ಸ್ಥಾಪಿಸಲು ಕ್ರಮ ವಹಿಸಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ </p><p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇನಾಂ ವೀರಾಪುರದ ಮರ್ಯಾದೆಗೇಡು ಹತ್ಯೆಗೆ ಸಂಬಂಧಿಸಿದಂತೆ ದಲಿತರ ಮೇಲೆ ದೌರ್ಜನ್ಯ (ಅಟ್ರಾಸಿಟಿ) ಮತ್ತು ಕೊಲೆ ಪ್ರಕರಣ ದಾಖಲಾಗಿದೆ. 60 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಪ್ರಕರಣದಲ್ಲಿ ಅಗತ್ಯ ಇದ್ದರೆ ಖಾಸಗಿಯಾಗಿ ಪ್ರಾಸಿಕ್ಯೂಟರ್ ನೇಮಕ ಮಾಡಿಕೊಳ್ಳಲಾಗುವುದು’ ಎಂದರು. </p><p>‘ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸಮನ್ವಯ ಸಮಿತಿ ರಚಿಸಬೇಕು. ಜಿಲ್ಲೆಯಲ್ಲಿ ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕು. ಕಾನೂನಿನಿಂದಲೇ ಎಲ್ಲವನ್ನು ಸರಿಪಡಿಸಲು ಆಗಲ್ಲ. ಜನರಲ್ಲಿ ಅರಿವು ಮೂಡಿಸಬೇಕು. ಸಮುದಾಯಗಳ ಆಲೋಚನೆ ಕ್ರಮ ಬದಲಾಗಬೇಕು’ ಎಂದರು. </p><p>‘ಇನಾಂ ವೀರಾಪುರದಲ್ಲಿ 9 ದಲಿತ ಕುಟುಂಬಗಳು ಇವೆ. ಸಂತ್ರಸ್ತ ದಲಿತ ಕುಟುಂಬದವರಿಗೆ ಪರಿಹಾರ ನೀಡಲಾಗಿದೆ. ಪುನರ್ವಸತಿ, ಭದ್ರತೆ, ರಕ್ಷಣೆ ಒದಗಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಮರ್ಯಾದೆ ಹತ್ಯೆ ತಡೆ ನಿಟ್ಟಿನಲ್ಲಿ ಕಠಿಣ ಕಾನೂನು ತರಲು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಕ್ರಮವಹಿಸುತ್ತೇವೆ’ ಎಂದರು. </p><p><strong>‘ಅಧಿಕಾರಿ ವಿರುದ್ಧ ದೂರು; ವಿಚಾರಣೆಗೆ ಸೂಚನೆ’</strong></p><p>‘ಇನಾಂ ವೀರಾಪುರದಲ್ಲಿ ನಡೆದ ಮಾರ್ಯದೆಗೇಡು ಹತ್ಯೆ ಪ್ರಕರಣ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯವರು ವಿಳಂಬ ಮತ್ತು ತಾತ್ಸಾರ ಮಾಡಿದರು ಎಂದು ಕೆಲವರು ದೂರಿದ್ಧಾರೆ. ಈ ಬಗ್ಗೆ ವಿಚಾರಣೆ ನಡೆಸಿ ಸತ್ಯಾಸತ್ಯತೆ ಪರಿಶೀಲಿಸುವಂತೆ ಇಲಾಖೆಯ ಆಯಕ್ತರಿಗೆ ಸೂಚನೆ ನೀಡಿದ್ದೇನೆ’ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. </p><p>‘ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ವಿರುದ್ಧ ದೂರು ಸಲ್ಲಿಕೆಯಾಗಿದೆ. ಸಮಗ್ರ ವಿಚಾರಣೆ ನಡೆಸಿ ವರದಿ ನೀಡಲು ಆಯಕ್ತರಿಗೆ ತಿಳಿಸಿದ್ದೇನೆ. ಇಲಾಖೆಯವರು ತಪ್ಪು ಎಸಗಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದ ಮಾರ್ಯದೆಗೇಡು ಹತ್ಯೆ ಪ್ರಕರಣದಲ್ಲಿ ತ್ವರಿತವಾಗಿ ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು. ಕಾನೂನು ಸಚಿವ, ಗೃಹಸಚಿವರೊಂದಿಗೆ ಚರ್ಚಿಸಿ ಇಲ್ಲಿನ ವಿಶೇಷ ಕೋರ್ಟ್ನಲ್ಲಿ ತ್ವರಿತಗತಿ ಕೋರ್ಟ್ ಸ್ಥಾಪಿಸಲು ಕ್ರಮ ವಹಿಸಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ </p><p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇನಾಂ ವೀರಾಪುರದ ಮರ್ಯಾದೆಗೇಡು ಹತ್ಯೆಗೆ ಸಂಬಂಧಿಸಿದಂತೆ ದಲಿತರ ಮೇಲೆ ದೌರ್ಜನ್ಯ (ಅಟ್ರಾಸಿಟಿ) ಮತ್ತು ಕೊಲೆ ಪ್ರಕರಣ ದಾಖಲಾಗಿದೆ. 60 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಪ್ರಕರಣದಲ್ಲಿ ಅಗತ್ಯ ಇದ್ದರೆ ಖಾಸಗಿಯಾಗಿ ಪ್ರಾಸಿಕ್ಯೂಟರ್ ನೇಮಕ ಮಾಡಿಕೊಳ್ಳಲಾಗುವುದು’ ಎಂದರು. </p><p>‘ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸಮನ್ವಯ ಸಮಿತಿ ರಚಿಸಬೇಕು. ಜಿಲ್ಲೆಯಲ್ಲಿ ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕು. ಕಾನೂನಿನಿಂದಲೇ ಎಲ್ಲವನ್ನು ಸರಿಪಡಿಸಲು ಆಗಲ್ಲ. ಜನರಲ್ಲಿ ಅರಿವು ಮೂಡಿಸಬೇಕು. ಸಮುದಾಯಗಳ ಆಲೋಚನೆ ಕ್ರಮ ಬದಲಾಗಬೇಕು’ ಎಂದರು. </p><p>‘ಇನಾಂ ವೀರಾಪುರದಲ್ಲಿ 9 ದಲಿತ ಕುಟುಂಬಗಳು ಇವೆ. ಸಂತ್ರಸ್ತ ದಲಿತ ಕುಟುಂಬದವರಿಗೆ ಪರಿಹಾರ ನೀಡಲಾಗಿದೆ. ಪುನರ್ವಸತಿ, ಭದ್ರತೆ, ರಕ್ಷಣೆ ಒದಗಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಮರ್ಯಾದೆ ಹತ್ಯೆ ತಡೆ ನಿಟ್ಟಿನಲ್ಲಿ ಕಠಿಣ ಕಾನೂನು ತರಲು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಕ್ರಮವಹಿಸುತ್ತೇವೆ’ ಎಂದರು. </p><p><strong>‘ಅಧಿಕಾರಿ ವಿರುದ್ಧ ದೂರು; ವಿಚಾರಣೆಗೆ ಸೂಚನೆ’</strong></p><p>‘ಇನಾಂ ವೀರಾಪುರದಲ್ಲಿ ನಡೆದ ಮಾರ್ಯದೆಗೇಡು ಹತ್ಯೆ ಪ್ರಕರಣ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯವರು ವಿಳಂಬ ಮತ್ತು ತಾತ್ಸಾರ ಮಾಡಿದರು ಎಂದು ಕೆಲವರು ದೂರಿದ್ಧಾರೆ. ಈ ಬಗ್ಗೆ ವಿಚಾರಣೆ ನಡೆಸಿ ಸತ್ಯಾಸತ್ಯತೆ ಪರಿಶೀಲಿಸುವಂತೆ ಇಲಾಖೆಯ ಆಯಕ್ತರಿಗೆ ಸೂಚನೆ ನೀಡಿದ್ದೇನೆ’ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. </p><p>‘ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ವಿರುದ್ಧ ದೂರು ಸಲ್ಲಿಕೆಯಾಗಿದೆ. ಸಮಗ್ರ ವಿಚಾರಣೆ ನಡೆಸಿ ವರದಿ ನೀಡಲು ಆಯಕ್ತರಿಗೆ ತಿಳಿಸಿದ್ದೇನೆ. ಇಲಾಖೆಯವರು ತಪ್ಪು ಎಸಗಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>