ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ನಗರದ ಬಹುತೇಕ ರಸ್ತೆಗಳು ಗುಂಡಿಮಯವಾಗಿವೆ. ಅದರಲ್ಲಿ ಬಿಡಾಡಿ ದನ ಹಾಗೂ ಕರುಗಳ ಕಾಟವೂ ಹೆಚ್ಚಾಗಿರುವ ಕಾರಣ ಸವಾರರು ಭೀತಿಯಿಂದಲೇ ವಾಹನ ಚಾಲನೆ ಮಾಡಬೇಕಾಗಿದೆ. ನಿತ್ಯ ಸಾವಿರಾರು ಜನ ಓಡಾಡುವ ಗೋಕುಲ ರಸ್ತೆ, ಸರಾಫ್ ಗಟ್ಟಿ, ದುರ್ಗದ ಬೈಲ್, ಜನತಾ ಬಜಾರ್, ತೊರವಿಹಕ್ಕಲ, ರೈಲ್ವೆ ನಿಲ್ದಾಣ ರಸ್ತೆ, ಬಂಕಾಪುರ ಚೌಕ್, ಶಿರೂರ ಪಾರ್ಕ್, ಅಕ್ಷಯ ಪಾರ್ಕ್ ಕಾಲೊನಿಯಲ್ಲಿ ಹಾವಳಿ ಹೆಚ್ಚಾಗಿದೆ. ಹೊಸೂರು ಕ್ರಾಸ್, ವಿದ್ಯಾನಗರದ ಬಳಿ ಬಿಆರ್ಟಿಎಸ್ ರಸ್ತೆಗಳ ಮೇಲೂ ಓಡಾಡುತ್ತಿವೆ.