ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿದ್ದೇ ಮೋದಿ ಸಾಧನೆ: ಸಂತೋಷ ಲಾಡ್‌ ಲೇವಡಿ

Published 16 ಆಗಸ್ಟ್ 2023, 5:55 IST
Last Updated 16 ಆಗಸ್ಟ್ 2023, 5:55 IST
ಅಕ್ಷರ ಗಾತ್ರ

ಧಾರವಾಡ: ‘ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷ ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿದ್ದು ಬಿಟ್ಟರೆ ಯಾವುದೇ ಪ್ರಗತಿ ಮಾಡಿಲ್ಲ’ ಎಂದು ಕಾರ್ಮಿಕ ಸಚಿವ ಸಂತೋಷ ಎಸ್‌.ಲಾಡ್‌ ಲೇವಡಿ ಮಾಡಿದರು.

‘ದೇಶದಲ್ಲಿ 1947 ರಿಂದ 2014ರವರೆಗೆ ವಿವಿಧ ಪಕ್ಷಗಳು ಆಡಳಿತ ನಡೆಸಿವೆ. 2014 ರವರೆಗೆ ₹ 55 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ₹ 175 ಲಕ್ಷ ಕೋಟಿಗೆ ತಲುಪಿದೆ. ‌ಡಾಲರ್‌ ಎದುರು ರೂಪಾಯಿ ಕುಸಿದಿದೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಪರಿಹರಿಸಲು ವಿಷಯಗಳ ಬಗ್ಗೆ ಮೋದಿ ಉತ್ತರಿಸಲ್ಲ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ರಾಜ್ಯ ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿ ಕಾರ್ಯಕ್ರಮಗಳು ಜನರಿಗೆ ತಲುಪುತ್ತಿರುವುದು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆಸಿದ್ದಾರೆ’ ಎಂದು ಅವರು ಆರೋಪಿಸಿದರು.

‘ಲೋಕಸಭೆ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಕಣಕ್ಕಿಳಿಯಲು ನನಗೆ ಆಸಕ್ತಿ ಇಲ್ಲ. ಆದರೆ, ಹೈಕಮಾಂಡ್‌ ಸೂಚಿಸಿದರೆ, ಸ್ಪರ್ಧಿಸುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT