<p><strong>ಹುಬ್ಬಳ್ಳಿ:</strong> ‘ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ನೆಲೆಗಟ್ಟು ಭದ್ರವಾಗಿದ್ದು, ಅದನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಚನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ಬನಶಂಕರಿ ದೇವಿ ದೇವಸ್ಥಾನದಲ್ಲಿ ಈಚೆಗೆ ನಡೆದ 27ನೇ ಪ್ರತಿಷ್ಠಾಪನಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಯುವಸಮೂಹವು ಸಾಮಾಜಿಕ ಜಾಲತಾಣದಲ್ಲಿ ತಲ್ಲೀನವಾಗಿದೆ. ಎಲ್ಲರಿಗೂ ಸಂಸ್ಕಾರ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಚಿಂತನೆಗಳನ್ನು ಕಲಿಸಬೇಕಿದೆ. ಈ ವಿಷಯದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ’ ಎಂದರು. </p>.<p>ಚಂದ್ರಶೃಂಗ ಪೂರ್ಣಶೇಖರ ಪ್ರತಿಷ್ಠಾನದ ಧರ್ಮದರ್ಶಿ ಶಾಕ್ಯಂ ಯುದಿಷ್ಠಿರ ಪ್ರಜ್ವಲ ಗುರೂಜಿ ಮಾತನಾಡಿ, ‘ತಾಯಿ ಗರ್ಭದಿಂದಲೇ ಮಕ್ಕಳಿಗೆ ಸಂಸ್ಕಾರ ಆರಂಭವಾಗುತ್ತದೆ. ಆನಂತರ ತಾಯಿ ನೀಡುವ ಸಂಸ್ಕಾರ ಮಕ್ಕಳ ಭವಿಷ್ಯ ರೂಪಿಸುತ್ತದೆ. ಇದು ದೇಶದ ಸಂಸ್ಕೃತಿಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಹೇಳಿದರು.</p>.<p>‘ರಾಷ್ಟ್ರ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ. ಪ್ರತಿಯೊಬ್ಬರೂ ಇವುಗಳನ್ನು ಕಾಪಾಡಿಕೊಳ್ಳಬೇಕು’ ಎಂದು ಹೇಳಿದರು. </p>.<p>ಲೇಖಕಿ ಶಾಂತಾ ಬಸವರಾಜ ರಚಿಸಿದ ‘ವಿಶ್ವಗುರು ಬಸವಣ್ಣ’ ಕೃತಿಯ 4ನೇ ಸಂಪುಟ ಬಿಡುಗಡೆ ಮಾಡಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಬಿ.ಎಲ್. ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. </p>.<p>ಬನಶಂಕರಿ ಬಡಾವಣೆ ನಿವಾಸಿಗಳ ಸಂಘದ ಅಧ್ಯಕ್ಷ ರಂಗಯ್ಯ ಬಿಜ್ಜೂರ, ಆಡಳಿತ ಮಂಡಳಿಯ ಗೌರವಾಧ್ಯಕ್ಷ ಶಂಕರ ಮೂರ್ತಿ, ಶಾಂತಾ ಬಸವರಾಜ, ಅಜಿತ ರೋಖಡೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ನೆಲೆಗಟ್ಟು ಭದ್ರವಾಗಿದ್ದು, ಅದನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಚನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ಬನಶಂಕರಿ ದೇವಿ ದೇವಸ್ಥಾನದಲ್ಲಿ ಈಚೆಗೆ ನಡೆದ 27ನೇ ಪ್ರತಿಷ್ಠಾಪನಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಯುವಸಮೂಹವು ಸಾಮಾಜಿಕ ಜಾಲತಾಣದಲ್ಲಿ ತಲ್ಲೀನವಾಗಿದೆ. ಎಲ್ಲರಿಗೂ ಸಂಸ್ಕಾರ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಚಿಂತನೆಗಳನ್ನು ಕಲಿಸಬೇಕಿದೆ. ಈ ವಿಷಯದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ’ ಎಂದರು. </p>.<p>ಚಂದ್ರಶೃಂಗ ಪೂರ್ಣಶೇಖರ ಪ್ರತಿಷ್ಠಾನದ ಧರ್ಮದರ್ಶಿ ಶಾಕ್ಯಂ ಯುದಿಷ್ಠಿರ ಪ್ರಜ್ವಲ ಗುರೂಜಿ ಮಾತನಾಡಿ, ‘ತಾಯಿ ಗರ್ಭದಿಂದಲೇ ಮಕ್ಕಳಿಗೆ ಸಂಸ್ಕಾರ ಆರಂಭವಾಗುತ್ತದೆ. ಆನಂತರ ತಾಯಿ ನೀಡುವ ಸಂಸ್ಕಾರ ಮಕ್ಕಳ ಭವಿಷ್ಯ ರೂಪಿಸುತ್ತದೆ. ಇದು ದೇಶದ ಸಂಸ್ಕೃತಿಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಹೇಳಿದರು.</p>.<p>‘ರಾಷ್ಟ್ರ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ. ಪ್ರತಿಯೊಬ್ಬರೂ ಇವುಗಳನ್ನು ಕಾಪಾಡಿಕೊಳ್ಳಬೇಕು’ ಎಂದು ಹೇಳಿದರು. </p>.<p>ಲೇಖಕಿ ಶಾಂತಾ ಬಸವರಾಜ ರಚಿಸಿದ ‘ವಿಶ್ವಗುರು ಬಸವಣ್ಣ’ ಕೃತಿಯ 4ನೇ ಸಂಪುಟ ಬಿಡುಗಡೆ ಮಾಡಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಬಿ.ಎಲ್. ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. </p>.<p>ಬನಶಂಕರಿ ಬಡಾವಣೆ ನಿವಾಸಿಗಳ ಸಂಘದ ಅಧ್ಯಕ್ಷ ರಂಗಯ್ಯ ಬಿಜ್ಜೂರ, ಆಡಳಿತ ಮಂಡಳಿಯ ಗೌರವಾಧ್ಯಕ್ಷ ಶಂಕರ ಮೂರ್ತಿ, ಶಾಂತಾ ಬಸವರಾಜ, ಅಜಿತ ರೋಖಡೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>