<p><strong>ಹುಬ್ಬಳ್ಳಿ: </strong>ನಗರದ ಕಿಮ್ಸ್ನಲ್ಲಿ ಲಭ್ಯವಾಗುತ್ತಿರುವ ಚಿಕಿತ್ಸೆ, ಊಟ, ಉಪಚಾರದ ಕ್ರಮಗಳ ಬಗ್ಗೆ ಸೋಂಕಿತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಉತ್ತರ ಕರ್ನಾಟಕದ ಜನರ ಪಾಲಿಗೆ ಸಂಜೀವಿನಿ ಎಂದೇ ಹೆಸರಾಗಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಕೋವಿಡ್ ಕಾಣಿಸಿಕೊಂಡ ಮಾರ್ಚ್ ತಿಂಗಳಿನಿಂದಲೂ ಚಿಕಿತ್ಸೆಗೆ ಸತತವಾಗಿ ಶ್ರಮಿಸುತ್ತಿದೆ. ತಜ್ಞ ವೈದ್ಯರು, ವೈದ್ಯಕೀಯ ಸೌಲಭ್ಯಗಳು , ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿಯ ಕಾರ್ಯ ಉಳಿದ ಆಸ್ಪತ್ರೆಗಳಿಗೂ ಮಾದರಿಯಾಗಿದೆ ಎನ್ನುತ್ತಾರೆ ಕೋವಿಡ್ ನಿಂದ ಗುಣಮುಖರಾದರು.</p>.<p>ಪಿಎಂಎಸ್ ಎಸ್ವೈನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸುಸಜ್ಜಿತ ಕಟ್ಟಡದಲ್ಲಿ ರೋಗಿಗಳ ಆರೈಕೆಯ ಬಗ್ಗೆ ಚಿಕಿತ್ಸೆ ಪಡೆದು ಗುಣಮುಖರಾದವರು, ಕೋವಿಡ್ ವಾರಿಯರ್ಗಳ ಕರ್ತವ್ಯ ನಿಷ್ಠೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.</p>.<p>ಕೋವಿಡ್ ನಿಂದ ಗುಣಮುಖರಾದ ಹುಬ್ಬಳ್ಳಿಯ ಕೇಶ್ವಾಪುರದ ಸೈಯದ್ ಸಮೀವುಲ್ಲಾ ಪಾಷಾ ಮಾತನಾಡಿ, ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಿಮ್ಸ್ನ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ಉತ್ತಮ ಚಿಕಿತ್ಸೆ ದೊರೆಯಿತು. ಸ್ವಚ್ಚತೆ, ನೈರ್ಮಲ್ಯ ಕಾಲಕಾಲಕ್ಕೆ ಉತ್ತಮ ಪೌಷ್ಟಿಕಾಂಶವುಳ್ಳ ಊಟ, ಉಪಹಾರ, ಸೂಪ್ ನೀಡಿ ಆರೈಕೆ ಮಾಡುತ್ತಿದ್ದಾರೆ. ವೈದ್ಯರು , ಸಿಬ್ಬಂದಿಯ ಶ್ರಮಕ್ಕೆ ಕೃತಜ್ಞನಾಗಿದ್ದೇನೆ ಎಂದು ಖುಷಿ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದ ಕಿಮ್ಸ್ನಲ್ಲಿ ಲಭ್ಯವಾಗುತ್ತಿರುವ ಚಿಕಿತ್ಸೆ, ಊಟ, ಉಪಚಾರದ ಕ್ರಮಗಳ ಬಗ್ಗೆ ಸೋಂಕಿತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಉತ್ತರ ಕರ್ನಾಟಕದ ಜನರ ಪಾಲಿಗೆ ಸಂಜೀವಿನಿ ಎಂದೇ ಹೆಸರಾಗಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಕೋವಿಡ್ ಕಾಣಿಸಿಕೊಂಡ ಮಾರ್ಚ್ ತಿಂಗಳಿನಿಂದಲೂ ಚಿಕಿತ್ಸೆಗೆ ಸತತವಾಗಿ ಶ್ರಮಿಸುತ್ತಿದೆ. ತಜ್ಞ ವೈದ್ಯರು, ವೈದ್ಯಕೀಯ ಸೌಲಭ್ಯಗಳು , ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿಯ ಕಾರ್ಯ ಉಳಿದ ಆಸ್ಪತ್ರೆಗಳಿಗೂ ಮಾದರಿಯಾಗಿದೆ ಎನ್ನುತ್ತಾರೆ ಕೋವಿಡ್ ನಿಂದ ಗುಣಮುಖರಾದರು.</p>.<p>ಪಿಎಂಎಸ್ ಎಸ್ವೈನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸುಸಜ್ಜಿತ ಕಟ್ಟಡದಲ್ಲಿ ರೋಗಿಗಳ ಆರೈಕೆಯ ಬಗ್ಗೆ ಚಿಕಿತ್ಸೆ ಪಡೆದು ಗುಣಮುಖರಾದವರು, ಕೋವಿಡ್ ವಾರಿಯರ್ಗಳ ಕರ್ತವ್ಯ ನಿಷ್ಠೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.</p>.<p>ಕೋವಿಡ್ ನಿಂದ ಗುಣಮುಖರಾದ ಹುಬ್ಬಳ್ಳಿಯ ಕೇಶ್ವಾಪುರದ ಸೈಯದ್ ಸಮೀವುಲ್ಲಾ ಪಾಷಾ ಮಾತನಾಡಿ, ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಿಮ್ಸ್ನ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ಉತ್ತಮ ಚಿಕಿತ್ಸೆ ದೊರೆಯಿತು. ಸ್ವಚ್ಚತೆ, ನೈರ್ಮಲ್ಯ ಕಾಲಕಾಲಕ್ಕೆ ಉತ್ತಮ ಪೌಷ್ಟಿಕಾಂಶವುಳ್ಳ ಊಟ, ಉಪಹಾರ, ಸೂಪ್ ನೀಡಿ ಆರೈಕೆ ಮಾಡುತ್ತಿದ್ದಾರೆ. ವೈದ್ಯರು , ಸಿಬ್ಬಂದಿಯ ಶ್ರಮಕ್ಕೆ ಕೃತಜ್ಞನಾಗಿದ್ದೇನೆ ಎಂದು ಖುಷಿ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>