ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಪ್ರೆಟಿಶಿಪ್ ತರಬೇತಿ ಪಡೆದ ಡಿಪ್ಲೊಮಾ ಪದವೀಧರರಿಗೆ ಉದ್ಯೋಗ ನೀಡಲು 2010ರಲ್ಲಿ ರೈಲ್ವೆ ಬೋರ್ಡ್ ಆದೇಶ ಹೊರಡಿಸಿತ್ತು. ಬೆಂಗಳೂರು, ಮೈಸೂರು, ಹುಬ್ಬಳ್ಳಿ ವಿಭಾಗ ಹೊರತುಪಡಿಸಿ ಉಳಿದ ವಲಯದಲ್ಲಿ ರೈಲ್ವೆ ಬೋರ್ಡ್ ಆದೇಶದಂತೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಆದರೆ, ನೈರುತ್ಯ ರೈಲ್ವೆ ವಲಯ ಮಾತ್ರ ಈ ಬಗ್ಗೆ ಸ್ಪಷ್ಟೀಕರಣ ಕೇಳಿ ರೈಲ್ವೆ ಬೋರ್ಡ್ಗೆ ಪತ್ರ ಬರೆದಿದೆ. ಇದಕ್ಕೆ ರೈಲ್ವೆ ಬೋರ್ಡ್ 2012ರಲ್ಲಿ ಸ್ಪಷ್ಟೀಕರಣ ನೀಡಿದ್ದು, ಪ್ರಕ್ರಿಯೆ ಪೂರ್ಣಗೊಳಿಸಲು ಸ್ಥಳೀಯ ರೈಲ್ವೆ ಜನರಲ್ ಮ್ಯಾನೇಜರ್ಗೆ ಜವಾಬ್ದಾರಿ ನೀಡಲಾಗಿದೆ. ಆದರೆ ಅವರು ನೇಮಕಾತಿ ಪ್ರಕ್ರಿಯೆಗೆ ಆದೇಶ ಹೊರಡಿಸಲು ಮೀನಮೇಷ ಎಣಿಸುತ್ತಿದ್ದಾರೆ’ ಎಂದು ಆರೋಪಿಸಿದರು.