<p><strong>ಹುಬ್ಬಳ್ಳಿ</strong>: ಕಲ್ಯಾಣ ಕರ್ನಾಟಕದ ಸರ್ಕಾರಿ ನೌಕರರಿಗೆ ಬೆಳಗಾವಿ ವಿಭಾಗದಲ್ಲಿ ಶೇ 8ರಷ್ಟು ನೇಮಕಾತಿ ಮತ್ತು ಮುಂಬಡ್ತಿ ಮೀಸಲಾತಿ ನೀಡಲು ಸರ್ಕಾರದ ಆದೇಶ ಇದ್ದರೂ ಪಾಲನೆ ಆಗುತ್ತಿಲ್ಲ ಎಂದು ಅಹಿಂದ ಚಿಂತಕರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೈಬಣ್ಣಾ ಜಮಾದಾರ ದೂರಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳ ವರ್ತನೆಯಿಂದಾಗಿ ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ ಅನ್ಯಾಯವಾಗಿದೆ. ಈ ಕುರಿತು ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಆ ಭಾಗದ ಕಂದಾಯ ಇಲಾಖೆ, ಪೊಲೀಸ್, ಶಿಕ್ಷಣ, ಸಾರಿಗೆ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ನೌಕರರು ಜೇಷ್ಠತಾ ಪಟ್ಟಿಯ ಅನ್ವಯ 8-12 ವರ್ಷ ಹಿರಿಯರಿದ್ದರೂ ಮುಂಬಡ್ತಿ ಸಿಗುತ್ತಿಲ್ಲ ಎಂದು ಹೇಳಿದರು</p>.<p>ಮುಂಬಡ್ತಿ ನೀಡದೆ ಸರ್ಕಾರದ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಹೆಚ್ಚುವರಿ ಆಯುಕ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಅವರ ಅಮಾನತಿಗೆ ಒತ್ತಾಯಿಸಿ, ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು.</p>.<p>ಇದೇ ರೀತಿ ಇತರ ಇಲಾಖೆಯ ಆಯುಕ್ತರಿಗೂ ಮನವಿ ಸಲ್ಲಿಸಲಾಗುವುದು. ಹೈಕ ವಿಭಾಗದ ಸರ್ಕಾರಿ ನೌಕರರಿಗೆ ಮುಂಬಡ್ತಿ ನೀಡುವಂತೆ ಒತ್ತಾಯಿಸಿ, ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p>ವೇದಿಕೆಯ ಖಜಾಂಚಿ ಸಂಜು ಹೊಡಲ್ಕರ್, ಸಂಗಣ್ಣಾ ನಿಂಬರ್ಗಾ, ನಾಗರಾಜ ಸೋಲಾಪೂರಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕಲ್ಯಾಣ ಕರ್ನಾಟಕದ ಸರ್ಕಾರಿ ನೌಕರರಿಗೆ ಬೆಳಗಾವಿ ವಿಭಾಗದಲ್ಲಿ ಶೇ 8ರಷ್ಟು ನೇಮಕಾತಿ ಮತ್ತು ಮುಂಬಡ್ತಿ ಮೀಸಲಾತಿ ನೀಡಲು ಸರ್ಕಾರದ ಆದೇಶ ಇದ್ದರೂ ಪಾಲನೆ ಆಗುತ್ತಿಲ್ಲ ಎಂದು ಅಹಿಂದ ಚಿಂತಕರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೈಬಣ್ಣಾ ಜಮಾದಾರ ದೂರಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳ ವರ್ತನೆಯಿಂದಾಗಿ ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ ಅನ್ಯಾಯವಾಗಿದೆ. ಈ ಕುರಿತು ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಆ ಭಾಗದ ಕಂದಾಯ ಇಲಾಖೆ, ಪೊಲೀಸ್, ಶಿಕ್ಷಣ, ಸಾರಿಗೆ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ನೌಕರರು ಜೇಷ್ಠತಾ ಪಟ್ಟಿಯ ಅನ್ವಯ 8-12 ವರ್ಷ ಹಿರಿಯರಿದ್ದರೂ ಮುಂಬಡ್ತಿ ಸಿಗುತ್ತಿಲ್ಲ ಎಂದು ಹೇಳಿದರು</p>.<p>ಮುಂಬಡ್ತಿ ನೀಡದೆ ಸರ್ಕಾರದ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಹೆಚ್ಚುವರಿ ಆಯುಕ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಅವರ ಅಮಾನತಿಗೆ ಒತ್ತಾಯಿಸಿ, ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು.</p>.<p>ಇದೇ ರೀತಿ ಇತರ ಇಲಾಖೆಯ ಆಯುಕ್ತರಿಗೂ ಮನವಿ ಸಲ್ಲಿಸಲಾಗುವುದು. ಹೈಕ ವಿಭಾಗದ ಸರ್ಕಾರಿ ನೌಕರರಿಗೆ ಮುಂಬಡ್ತಿ ನೀಡುವಂತೆ ಒತ್ತಾಯಿಸಿ, ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p>ವೇದಿಕೆಯ ಖಜಾಂಚಿ ಸಂಜು ಹೊಡಲ್ಕರ್, ಸಂಗಣ್ಣಾ ನಿಂಬರ್ಗಾ, ನಾಗರಾಜ ಸೋಲಾಪೂರಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>