ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯದ 453 ಸರ್ಕಾರಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸಿರುವ 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಗೆ ಮಾರ್ಚ್ನಿಂದ ವೇತನ ಪಾವತಿಯಾಗಿಲ್ಲ. ಕುಟುಂಬ ನಿರ್ವಹಣೆಗೆ ನೌಕರಿಯಿಂದಲೇ ಬರುವ ವೇತನ ನೆಚ್ಚಿಕೊಂಡಿರುವ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಈ ಕುರಿತು ತುರ್ತು ನಿರ್ಧಾರ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.