ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಬೈರತಿ ಬಸವರಾಜ ಹುಬ್ಬಳ್ಳಿಯಲ್ಲಿ ಕಾಮಗಾರಿಗಳ ಪರಿಶೀಲನೆ

Last Updated 6 ಸೆಪ್ಟೆಂಬರ್ 2020, 2:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಬೆಳಿಗ್ಗೆ 6.30ರಿಂದಲೇ ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮೊದಲು ಇಂದಿರಾ ಗಾಜಿನ ಮನೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ವಾಕಿಂಗ್ ಬಂದಿದ್ದ ಜನ ಕಾಮಗಾರಿ ಆರಂಭವಾಗಿ 18 ತಿಂಗಳು ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಅನಗತ್ಯವಾಗಿ ಸಾರ್ವಜನಿಕರ ಹಣ ಪೋಲು ಮಾಡಲಾಗುತ್ತಿದೆ. ಕಾಮಗಾರಿ ಮಾಡಿ ಕೈ ಬಿಟ್ಟರೆ ಅವುಗಳ ನಿರ್ವಹಣೆ ಯಾರು ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಗೋಕುಲ ರಸ್ತೆಯ ಎಂ.ಎಸ್.ಎಂ.ಇ ಕೈಗಾರಿಕಾ ಪ್ರದೇಶ, ಕಾಟನ್ ಮಾರುಕಟ್ಟೆಯ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ, ಎಂ.ಜಿ.ಪಾರ್ಕ್, ಚಿಟಗುಪ್ಪಿ ಆಸ್ಪತ್ರೆ, ಮೀನಿನ ಮಾರುಕಟ್ಟೆ, ತಬೀಬ್ ಲ್ಯಾಂಡ್ ನ ಬಿ.ಎಸ್.ಯು.ಪಿ. ಪ್ಯಾಕೇಜ್ 3 ಗಳಿಗೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT