‘ಈಜುಕೊಳದಿಂದ ಮೊದಲು ನೀರು ಸೋರಿಕೆಯಾಗುತ್ತಿತ್ತು. ಪೂರ್ಣ ಶುದ್ಧೀಕರಣ ಆಗುತ್ತಿರಲಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಪತ್ತೆ ಹಚ್ಚಿ ಹಂತ, ಹಂತವಾಗಿ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ಅಭಿವೃದ್ಧಿ ಪಡಿಸಲಾಗಿದೆ. ಮಹಾತ್ಮ ಗಾಂಧೀಜಿ ಅವರ ಜನ್ಮ ದಿನದಂದು ಸ್ಮಾರ್ಟ್ ಸಿಟಿಯ ಒಂದು ಯೋಜನೆ ಉದ್ಘಾಟಿಸಲು ಉದ್ದೇಶಿಸಲಾಗಿದೆ’ ಎಂದು ಸ್ಮಾರ್ಟ್ ಸಿಟಿ ಯೋಜನೆಯ ವಿಶೇಷ ಅಧಿಕಾರಿ ಎಸ್.ಎಚ್. ನರೇಗಲ್ ‘ಪ್ರಜಾವಾಣಿ’ಗೆ ತಿಳಿಸಿದರು.