ನವಲಗುಂದ: ಕಲಬುರಗಿ ಜಿಲ್ಲೆ ಕೋಟನೂರನಲ್ಲಿ ಬಾಬಾಸಾಹೇಬ ಅಂಬೇಡ್ಕರ್ ರವರ ಪುತ್ಥಳಿಗೆ ಅವಮಾನ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿ ತಹಶೀಲ್ದಾರ್ ಇಲಾಖೆಯ ಶೋಭಾ ಹುಲ್ಲಣ್ಣವರಗೆ ಮನವಿ ಸಲ್ಲಿಸಿತು.
ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಮಾದರ ಮಾತನಾಡಿ, ಕಲಬುರಗಿ ಜಿಲ್ಲಾಡಳಿತ ತನ್ನ ವಿಫಲತೆ ತೋರಿಸಿದ್ದು ಜಿಲ್ಲಾಡಳಿತದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿಯ ಘಟನೆ ಮತ್ತೊಮ್ಮೆ ಘಟಿಸದಂತೆ ರಾಜ್ಯದ ಎಲ್ಲ ಜಿಲ್ಲಾಡಳಿತಗಳಿಗೆ ಎಚ್ಚರ ವಹಿಸಲು ಆದೇಶಿಸಬೇಕೆಂದು ಆಗ್ರಹಿಸಿದರು.