<p><strong>ಹುಬ್ಬಳ್ಳಿ:</strong> ’ನಿತ್ಯ ಯೋಗ ಮಾಡುವುದರಿಂದ ರೋಗಗಳು ನಿವಾರಣೆಯಾಗಿ ಆರೋಗ್ಯ ವೃದ್ಧಿಯಾಗುತ್ತದೆ. ಯೋಗ ಕಲಿಕೆ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ನಿತ್ಯ ಬದುಕಿನ ಭಾಗವಾಗಬೇಕು‘ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.</p><p>ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಇಲ್ಲಿನ ದೇಶಪಾಂಡೆ ನಗರದಲ್ಲಿನ ಜಿಮ್ಖಾನ್ ಮೈದಾನದಲ್ಲಿ ಕ್ಷಮತಾ ಸೇವಾ ಸಂಸ್ಥೆ ಹಾಗೂ ಧನ್ಯೋಸ್ಮಿ ಯೋಗ ಕೇಂದ್ರದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p><p>’ಯುವಸಮೂಹವು ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಮಾಡದೇ ಭಾರತೀಯ ಸಂಸ್ಕೃತಿಯ ಭಾಗವಾಗಿರುವ ಯೋಗವನ್ನು ನಿತ್ಯ ಅಭ್ಯಾಸ ಮಾಡಬೇಕು. ಇಂದು ವಿಶ್ವದ ಎಲ್ಲೆಡೆ ಯೋಗ ದಿನ ಆಚರಿಸಲಾಗುತ್ತಿದೆ. ಯೋಧರೂ ಸಹ ಯೋಗ ಮಾಡುವ ಮೂಲಕ ಯೋಗ ದಿನ ಆಚರಿಸುತ್ತಿದ್ದಾರೆ‘ ಎಂದರು.</p><p>ಡಾ.ಅನಿರುದ್ಧ ಕುಲಕರ್ಣಿ ಅವರು, ಯೋಗ ಕುರಿತು ಮಾತನಾಡಿದರು.</p><p>ಇದೇ ವೇಳೆ ಯೋಗ ಶಿಬಿರದಲ್ಲಿ ಭಾಗವಹಿಸಿದವರಿಗೆ ಕ್ಷಮತಾ ಸೇವಾ ಸಂಸ್ಥೆಯ ವತಿಯಿಂದ ಸಂಚಾಲಕ ಗೋವಿಂದ ಜೋಶಿ ಅವರು, ಪ್ರಮಾಣಪತ್ರಗಳನ್ನು ವಿತರಿಸಿದರು. </p><p>ನಗರದ ತೋಳನಕೆರೆ, ನೃಪತುಂಗ ಬೆಟ್ಟ, ಇಂದಿರಾ ಗಾಜಿನ ಮನೆ, ಪತಾಂಜಲಿ ಯೋಗ ಕೇಂದ್ರ, ಜೈನ್ ಮಂದಿರ, ಮೂರುಸಾವಿರ ಮಠ, ಸಿದ್ಧಾರೂಢ ಮಠ ಸೇರಿದಂತೆ ನಗರದ ಹಲವೆಡೆ ನೂರಾರು ಯೋಗಾಸಕ್ತರು ಯೋಗ ಕಲಿಯುವ ಮೂಲಕ ವಿಶ್ವ ಯೋಗ ದಿನ ಆಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ’ನಿತ್ಯ ಯೋಗ ಮಾಡುವುದರಿಂದ ರೋಗಗಳು ನಿವಾರಣೆಯಾಗಿ ಆರೋಗ್ಯ ವೃದ್ಧಿಯಾಗುತ್ತದೆ. ಯೋಗ ಕಲಿಕೆ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ನಿತ್ಯ ಬದುಕಿನ ಭಾಗವಾಗಬೇಕು‘ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.</p><p>ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಇಲ್ಲಿನ ದೇಶಪಾಂಡೆ ನಗರದಲ್ಲಿನ ಜಿಮ್ಖಾನ್ ಮೈದಾನದಲ್ಲಿ ಕ್ಷಮತಾ ಸೇವಾ ಸಂಸ್ಥೆ ಹಾಗೂ ಧನ್ಯೋಸ್ಮಿ ಯೋಗ ಕೇಂದ್ರದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p><p>’ಯುವಸಮೂಹವು ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಮಾಡದೇ ಭಾರತೀಯ ಸಂಸ್ಕೃತಿಯ ಭಾಗವಾಗಿರುವ ಯೋಗವನ್ನು ನಿತ್ಯ ಅಭ್ಯಾಸ ಮಾಡಬೇಕು. ಇಂದು ವಿಶ್ವದ ಎಲ್ಲೆಡೆ ಯೋಗ ದಿನ ಆಚರಿಸಲಾಗುತ್ತಿದೆ. ಯೋಧರೂ ಸಹ ಯೋಗ ಮಾಡುವ ಮೂಲಕ ಯೋಗ ದಿನ ಆಚರಿಸುತ್ತಿದ್ದಾರೆ‘ ಎಂದರು.</p><p>ಡಾ.ಅನಿರುದ್ಧ ಕುಲಕರ್ಣಿ ಅವರು, ಯೋಗ ಕುರಿತು ಮಾತನಾಡಿದರು.</p><p>ಇದೇ ವೇಳೆ ಯೋಗ ಶಿಬಿರದಲ್ಲಿ ಭಾಗವಹಿಸಿದವರಿಗೆ ಕ್ಷಮತಾ ಸೇವಾ ಸಂಸ್ಥೆಯ ವತಿಯಿಂದ ಸಂಚಾಲಕ ಗೋವಿಂದ ಜೋಶಿ ಅವರು, ಪ್ರಮಾಣಪತ್ರಗಳನ್ನು ವಿತರಿಸಿದರು. </p><p>ನಗರದ ತೋಳನಕೆರೆ, ನೃಪತುಂಗ ಬೆಟ್ಟ, ಇಂದಿರಾ ಗಾಜಿನ ಮನೆ, ಪತಾಂಜಲಿ ಯೋಗ ಕೇಂದ್ರ, ಜೈನ್ ಮಂದಿರ, ಮೂರುಸಾವಿರ ಮಠ, ಸಿದ್ಧಾರೂಢ ಮಠ ಸೇರಿದಂತೆ ನಗರದ ಹಲವೆಡೆ ನೂರಾರು ಯೋಗಾಸಕ್ತರು ಯೋಗ ಕಲಿಯುವ ಮೂಲಕ ವಿಶ್ವ ಯೋಗ ದಿನ ಆಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>