<p><strong>ಧಾರವಾಡ</strong>: ‘ಭೂಮಿಯಾಚೆಗಿನ ಇತರ ಗ್ರಹಗಳಿಗೂ ತಲುಪುವ ಸಾಮರ್ಥ್ಯವನ್ನು ಮಾನವ ಕಂಡುಕೊಂಡಿದ್ಧಾನೆ. ಇತರ ಗ್ರಹಗಳಲ್ಲಿ ವಾಸ ಸ್ಥಾನ ನಿರ್ಮಾಣಕ್ಕೆ ಸಿದ್ಧತೆಗಳು ನಡೆದಿವೆ’ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾಜಿ ಅಧ್ಯಕ್ಷ ಎ.ಎಸ್.ಕಿರಣಕುಮಾರ ಹೇಳಿದರು. </p>.<p>ಕರ್ನಾಟಕ ವಿಶ್ವವಿದ್ಯಾಲಯದ ಗಾಂಧೀ ಭವನದಲ್ಲಿ ಗುರುವಾರ ನಡೆದ 75ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ‘ಬದಲಾವಣೆ ವೇಗ ನಿಧಾನವಾಗಿದ್ದಾಗ, ಜನರು ಹೊಸ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಸಾಕಷ್ಟು ಸಮಯ ಸಿಗುತ್ತಿತ್ತು. ಆದರೆ ಈಗ ವೇಗವಾದ ಬದಲಾವಣೆಗಳು ವ್ಯಕ್ತಿಗಳು, ಗುಂಪುಗಳು, ಸಮುದಾಯಗಳು ಮತ್ತು ರಾಷ್ಟ್ರಗಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ಸಂಶೋಧಕರು ವಿವರಿಸಿದ್ದಾರೆ’ ಎಂದರು.</p>.<p>ಪ್ರಸ್ತುತ ಲಭ್ಯವಿರುವ ತಂತ್ರಜ್ಞಾನಗಳನ್ನು ಮಾತ್ರ ಬಳಸಿಕೊಂಡು ಸಮಸ್ಯೆಗಳನ್ನು ಪರಿಹರಿಸಿದರೆ ಸಾಲದು. ಇತರರಿಗಿಂತ ಮುಂದೆ ಸಾಗಬೇಕು. ಈಗ ಎಲ್ಲರೂ ವಿಶ್ವದ ಅನ್ವೇಷಕರೇ ಆಗಿದ್ದಾರೆ. ಈ ಅನ್ವೇಷಣೆ ನಿಟ್ಟಿನಲ್ಲಿ ನಮಲ್ಲಿ ಇರುವ ಸಾಮರ್ಥ್ಯಗಳನ್ನು ತಿಳಿದುಕೊಳ್ಳಬೇಕು ಎಂದರು. </p>. <p>ಶಿಕ್ಷಣ ತಜ್ಞ, ಪ್ರೊ.ಅಚ್ಯುತ ಸಾಮಂತ, ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಹಾಗೂ ಹುಬ್ಬಳ್ಳಿಯ ಮಜೇಥಿಯಾ ಫೌಂಡೇಶನ್ ಸ್ಥಾಪಕ ಜಿತೇಂದ್ರ ಡಿ. ಮಜೆಥಿಯಾ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. </p>.<p>ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ, ಕುಲಪತಿ ಪ್ರೊ.ಎ.ಎಂ.ಖಾನ್, ಆಡಳಿತಾಂಗ ಕುಲಸಚಿವ ಶಂಕರ ವಣಿಕ್ಯಾಳ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ವೈ.ಮಟ್ಟಿಹಾಳ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಭೂಮಿಯಾಚೆಗಿನ ಇತರ ಗ್ರಹಗಳಿಗೂ ತಲುಪುವ ಸಾಮರ್ಥ್ಯವನ್ನು ಮಾನವ ಕಂಡುಕೊಂಡಿದ್ಧಾನೆ. ಇತರ ಗ್ರಹಗಳಲ್ಲಿ ವಾಸ ಸ್ಥಾನ ನಿರ್ಮಾಣಕ್ಕೆ ಸಿದ್ಧತೆಗಳು ನಡೆದಿವೆ’ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾಜಿ ಅಧ್ಯಕ್ಷ ಎ.ಎಸ್.ಕಿರಣಕುಮಾರ ಹೇಳಿದರು. </p>.<p>ಕರ್ನಾಟಕ ವಿಶ್ವವಿದ್ಯಾಲಯದ ಗಾಂಧೀ ಭವನದಲ್ಲಿ ಗುರುವಾರ ನಡೆದ 75ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ‘ಬದಲಾವಣೆ ವೇಗ ನಿಧಾನವಾಗಿದ್ದಾಗ, ಜನರು ಹೊಸ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಸಾಕಷ್ಟು ಸಮಯ ಸಿಗುತ್ತಿತ್ತು. ಆದರೆ ಈಗ ವೇಗವಾದ ಬದಲಾವಣೆಗಳು ವ್ಯಕ್ತಿಗಳು, ಗುಂಪುಗಳು, ಸಮುದಾಯಗಳು ಮತ್ತು ರಾಷ್ಟ್ರಗಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ಸಂಶೋಧಕರು ವಿವರಿಸಿದ್ದಾರೆ’ ಎಂದರು.</p>.<p>ಪ್ರಸ್ತುತ ಲಭ್ಯವಿರುವ ತಂತ್ರಜ್ಞಾನಗಳನ್ನು ಮಾತ್ರ ಬಳಸಿಕೊಂಡು ಸಮಸ್ಯೆಗಳನ್ನು ಪರಿಹರಿಸಿದರೆ ಸಾಲದು. ಇತರರಿಗಿಂತ ಮುಂದೆ ಸಾಗಬೇಕು. ಈಗ ಎಲ್ಲರೂ ವಿಶ್ವದ ಅನ್ವೇಷಕರೇ ಆಗಿದ್ದಾರೆ. ಈ ಅನ್ವೇಷಣೆ ನಿಟ್ಟಿನಲ್ಲಿ ನಮಲ್ಲಿ ಇರುವ ಸಾಮರ್ಥ್ಯಗಳನ್ನು ತಿಳಿದುಕೊಳ್ಳಬೇಕು ಎಂದರು. </p>. <p>ಶಿಕ್ಷಣ ತಜ್ಞ, ಪ್ರೊ.ಅಚ್ಯುತ ಸಾಮಂತ, ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಹಾಗೂ ಹುಬ್ಬಳ್ಳಿಯ ಮಜೇಥಿಯಾ ಫೌಂಡೇಶನ್ ಸ್ಥಾಪಕ ಜಿತೇಂದ್ರ ಡಿ. ಮಜೆಥಿಯಾ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. </p>.<p>ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ, ಕುಲಪತಿ ಪ್ರೊ.ಎ.ಎಂ.ಖಾನ್, ಆಡಳಿತಾಂಗ ಕುಲಸಚಿವ ಶಂಕರ ವಣಿಕ್ಯಾಳ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ವೈ.ಮಟ್ಟಿಹಾಳ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>