ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಗುತ್ತೇದಾರ, ‘ದಿನೇಶ ಗುಂಡುರಾವ ರಾಜೀನಾಮೆ ನೀಡಿರುವುದು ನಿಜ. ಆದರೆ ಇವರ ರಾಜೀನಾಮೆಯನ್ನು ಎಐಸಿಸಿ ಅಧ್ಯಕ್ಷರು ಅಂಗೀಕರಿಸಿಲ್ಲ. ಅಲ್ಲದೇ, ಅವರಿಗೇ ಅಧ್ಯಕ್ಷರಾಗಿ ಮುಂದುವರಿಯಲು ಸೂಚನೆ ನೀಡಿದ್ದಾರೆ. ಹೀಗಾಗಿ, ಅಧ್ಯಕ್ಷರ ಸೂಚನೆ ಮೇರೆಗೆ ದಿನೇಶ ಗುಂಡುರಾವ ಅವರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿಯೇ ಇಲ್ಲ ಎಂದ ಮೇಲೆ ಅಧ್ಯಕ್ಷರ ನೇಮಕ ಮಾಡುವ ತಾಕತ್ತು ಕಾಂಗ್ರೆಸ್ ಪಕ್ಷಕ್ಕಿಲ್ಲವೆಂಬ ನಳಿನ್ಕುಮಾರ್ ಹೇಳಿಕೆ ಹಾಸ್ಯಾಸ್ಪದ’ ಎಂದಿದ್ದಾರೆ.