ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆಯೇ ಎನ್ನುವ ಪ್ರಶ್ನೆಗೆ ‘ಈಶ್ವರಪ್ಪ, ಗೋವಿಂದ ಕಾರಜೋಳ, ಆರ್. ಅಶೋಕ್ ಸೇರಿದಂತೆ ಅನೇಕ ಹಿರಿಯರು ಸಚಿವರಾಗಿದ್ದಾರೆ. ಬೇರೆ ಪಕ್ಷದಿಂದ ಬಂದವರಿಗೆ ಸ್ಥಾನಮಾನ ಕೊಡಬೇಕು ಎಂದಾಗ ಬದಲಾವಣೆ ಸಹಜ. ಮುಂದಿನ ದಿನಗಳಲ್ಲಿ ಪಕ್ಷ ಯಾವ ಕೆಲಸ ವಹಿಸುತ್ತದೆಯೋ ಅದನ್ನು ಮಾಡುತ್ತೇನೆ. ಸಂಘಟನೆಗೆ ಕರೆದರೂ ಹೋಗುತ್ತೇನೆ’ ಎಂದರು.