ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಧಾರವಾಡದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಮುಸ್ಲಿಂ ವ್ಯಾಪಾರಿಗೆ ಸೇರಿದ ಕಲ್ಲಂಗಡಿ ಅಂಗಡಿಯನ್ನು ಧ್ವಂಸಗೊಳಿಸಿದ್ದರ ಕುರಿತು ಮಾತನಾಡುವ ಕಾಂಗ್ರೆಸ್ನವರು, ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಬಗ್ಗೆ ಯಾಕೆ ದನಿ ಎತ್ತಲಿಲ್ಲ. ಯಾಕೆ ಆತನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಲಿಲ್ಲ’ ಎಂದು ಪ್ರಶ್ನಿಸಿದರು.