ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುರ್ಬಲ ವರ್ಗದ ಧ್ವನಿಯಾಗಿದ್ದ ಜಗಜೀವನ್‌ ರಾಂ: ಸಿ.ಎಂ ನಿಂಬಣ್ಣವರ

Last Updated 5 ಏಪ್ರಿಲ್ 2022, 15:39 IST
ಅಕ್ಷರ ಗಾತ್ರ

ಕಲಘಟಗಿ: ಸಮಾಜದಿಂದ ಅಲಕ್ಷಿಸಲ್ಪಟ್ಟ ಹಾಗೂ ದೇಶದ ದುರ್ಬಲ ವರ್ಗದವರ ಧ್ವನಿಯಾಗಿ ಬದುಕಿದ ನಾಯಕ ಬಾಬು ಜಗಜೀವನ್ ರಾಂ ಎಂದು ಶಾಸಕ ಸಿ.ಎಂ ನಿಂಬಣ್ಣವರ ಹೇಳಿದರು.

ಪಟ್ಟಣದ ಶಾಸಕರ ಮಾದರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ತಾಲ್ಲೂಕ ಆಡಳಿತ ಆಯೋಜಿಸಿದ್ದ ಬಾಬು ಜಗಜೀವನ್ ರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜಕೀಯವಾಗಿ ಅಪಾರ ಶಕ್ತಿ ಬೆಳೆಸಿಕೊಂಡಿದ್ದ ಅವರು, ಹಸಿರು ಕ್ರಾಂತಿಯ ಹರಿಕಾರ ಎಂದು ಬಿರುದು ಪಡೆದರು ಎಂದರು.

ಮಕ್ಕಳ ಸಾಹಿತಿ ವೈ.ಜಿ. ಭಗವತಿ ಬಾಬು ಜಗಜೀವನ್ ರಾಂ ಅವರ ಕುರಿತು ಉಪನ್ಯಾಸ ನೀಡಿದರು. ಬಾಬು ಜಗಜೀವನ್ ರಾಂ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು. ಡೊಳ್ಳು, ಜಾಂಜ್‌, ಮಜಲು ಹಾಗೂ ವಿವಿಧ ವಾದ್ಯ ಮೇಳಗಳು ಭಾಗವಹಿಸಿದ್ದವು.

ತಹಶೀಲ್ದಾರ್ ಯಲ್ಲಪ್ಪ ಗೊಣ್ಣೆನವರ, ತಾಲ್ಲೂಕು ಪಂಚಾಯಿತಿ ಇಒ ಶಿವಪುತ್ರಪ್ಪ ಮಠಪತಿ, ತಾಲ್ಲೂಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎ.ಜೆ. ಯೋಗಪ್ಪನವರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅನಸೂಯಾ ಹೆಬ್ಬಳಿಮಠ, ಉಪಾಧ್ಯಕ್ಷೆ ಯಲ್ಲವ್ವ ಶಿಗ್ಲಿ, ಗಂಗಾಧರ ಗೌಳಿ, ರಮೇಶ ಸೋಲರಾಗೋಪ್ಪ, ಶಶಿಕುಮಾರ ಕಟ್ಟಿಮನಿ, ಮಂಜುನಾಥ ಮಾದರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT