ಕರ್ನಾಟಕ ಕುರಿ ಅಭಿವೃದ್ಧಿ ನಿಗಮದ ಧಾರವಾಡ ಜಿಲ್ಲಾ ಸಹಾಯಕ ನಿರ್ದೇಶಕ ಡಾ.ಸುನೀಲ್ ಕುಮಾರ್ ಶೀಲವಂತಮಠ ಮಾತನಾಡಿ, ಮಾಂಸ ಮತ್ತು ಮಾಂಸೋತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡುವ ಸಲುವಾಗಿ ಪ್ರತಿ ಜಿಲ್ಲೆಗೆ ಇಬ್ಬರು ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ₹11 ಲಕ್ಷ ಮೊತ್ತದಲ್ಲಿ ಸಂಚಾರಿ ಮಾಂಸ ಮಾರಾಟ ಮಳಿಗೆಗಳನ್ನು ಪ್ರಾಯೋಗಿಕವಾಗಿ ನೀಡಲಾಗುತ್ತಿದೆ. ಇದರಲ್ಲಿ ₹ 8.25 ಲಕ್ಷ ಸಹಾಯಧನ ಮತ್ತು ₹2.75 ಲಕ್ಷ ಬ್ಯಾಂಕ್ ಸಾಲ ಸೌಲಭ್ಯವಿದೆ ಎಂದು ಹೇಳಿದರು.