<p><strong>ಧಾರವಾಡ:</strong> ಜೈಲಿನಲ್ಲಿ ಜಾಮರ್ ಅಳವಡಿಸಿರುವುದರಿಂದ ಈ ಭಾಗದಲ್ಲಿ ಜನರಿಗೆ ತೊಂದರೆ ಕಡಿಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ಕಾರಾಗೃಹ ಮತ್ತು ಸುಧಾರಣೆ ಸೇವೆಗಳ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮರ್ ಸಮಸ್ಯೆಯನ್ನು ಟಿಸಿಎಲ್ ಸಂಸ್ಥೆ ಗಮನಕ್ಕೆ ತರಲಾಗಿದೆ. ಬೆಳಗಾವಿಯ ಜೈಲು ಭಾಗದಲ್ಲೂ ಜಾಮರ್ ಸಮಸ್ಯೆ ಇದೆ. ಸಮಸ್ಯೆ ಪರಿಹಾರಕ್ಕೆ ಬಹಳಷ್ಟು ಪ್ರಯತ್ನ ಮಾಡಬೇಕಿದೆ’ ಎಂದರು</p>.<p>‘ಸ್ಥಾಪನೆಯಾದಾಗ ಕಾರಾಗೃಹ ಊರ ಹೊರಗೆ ಇತ್ತು. ಈ ಊರು ಬೆಳೆದು ಕಾರಾಗೃಹ ಸುತ್ತಮುತ್ತ ನಗರಗಳಾಗಿವೆ. ಕಾರಾಗೃಹದಲ್ಲಿ ನೆಟ್ವರ್ಕ್ ಸಿಗದಂತೆ ನೋಡಿಕೊಳ್ಳುವುದೂ ಅನಿವಾರ್ಯ’ ಎಂದರು.</p>.<p>'ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಕಾಯಂ ವೈದ್ಯರು ಇಲ್ಲ. ದೈನಂದಿನ ಸಂಬಳದ ವೈದ್ಯರೊಬ್ಬರು ಭೇಟಿ ನೀಡುತ್ತಾರೆ. ಕೈದಿಗಳಿಗೆ ಮಾನಸಿಕ ಖಿನ್ನತೆ ಜಾಸ್ತಿ ಇರುತ್ತದೆ. ಈಚೆಗೆ ಈ ಜೈಲಿನಲ್ಲಿ ಕೈದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೈದಿಗಳ ಖಿನ್ನತೆ ನಿವಾರಣೆಗೆ ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>‘ಮೊದಲ ಬಾರಿಗೆ ಅಪರಾಧ ಎಸಗಿದವರು, ಯುವ ಕೈದಿಗಳನ್ನು ಪ್ರತ್ಯೇಕವಾಗಿ ಇಡಲು ವ್ಯವಸ್ಥೆ ಮಾಡಲಾಗಿದೆ. ಧಾರವಾಡ ಮತ್ತು ಬೆಳಗಾವಿ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಕಡಿಮೆ ಕೈದಿಗಳು ಇದ್ದಾರೆ. ಬೆಂಗಳೂರು, ಮಂಗಳೂರು, ಗದಗ, ಕೋಲಾರ ಇತರೆಡೆಗಳ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕೈದಿಗಳು ಇದ್ದಾರೆ ಎಂದು ತಿಳಿಸಿದರು.</p>.<p>‘ಜೈಲು ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಈ ಜೈಲಿನಲ್ಲಿ ಈಚೆಗೆ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ’ ಎಂದರು.</p>.<p><strong>‘ಮಾದಕ ಪದಾರ್ಥ; ತೀವ್ರ ನಿಗಾ’</strong></p><p> ಜೈಲಿನಲ್ಲಿ ಮಾದಕ ಪದಾರ್ಥಗಳಿಗೆ ಸಂಬಂಧಿಸಿ ತೀವ್ರ ನಿಗಾ ಇಟ್ಟಿದ್ಧೇವೆ. ಹೊಸ ಕೈದಿಗಳನ್ನು ಬರುವಾಗ ತಪಾಸಣೆ ಮಾಡಿಸುತ್ತೇವೆ. ಸಂಶಯ ಇರುವವರನ್ನು ಪರೀಕ್ಷೆ ಮಾಡಿಸುತ್ತೇವೆ. ಜೈಲಿನಿಂದ ಹೋಗುವಾಗ ಪರೀಕ್ಷೆ ಮಾಡಿಸುತ್ತೇವೆ. ಸೇವನೆ ಮಾಡಿರುವುದು ದೃಢಪಟ್ಟರೆ ಪ್ರಕರಣ ದಾಖಲಿಸುತ್ತೇವೆ’ ಎಂದು ಅಲೋಕ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಜೈಲಿನಲ್ಲಿ ಜಾಮರ್ ಅಳವಡಿಸಿರುವುದರಿಂದ ಈ ಭಾಗದಲ್ಲಿ ಜನರಿಗೆ ತೊಂದರೆ ಕಡಿಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ಕಾರಾಗೃಹ ಮತ್ತು ಸುಧಾರಣೆ ಸೇವೆಗಳ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮರ್ ಸಮಸ್ಯೆಯನ್ನು ಟಿಸಿಎಲ್ ಸಂಸ್ಥೆ ಗಮನಕ್ಕೆ ತರಲಾಗಿದೆ. ಬೆಳಗಾವಿಯ ಜೈಲು ಭಾಗದಲ್ಲೂ ಜಾಮರ್ ಸಮಸ್ಯೆ ಇದೆ. ಸಮಸ್ಯೆ ಪರಿಹಾರಕ್ಕೆ ಬಹಳಷ್ಟು ಪ್ರಯತ್ನ ಮಾಡಬೇಕಿದೆ’ ಎಂದರು</p>.<p>‘ಸ್ಥಾಪನೆಯಾದಾಗ ಕಾರಾಗೃಹ ಊರ ಹೊರಗೆ ಇತ್ತು. ಈ ಊರು ಬೆಳೆದು ಕಾರಾಗೃಹ ಸುತ್ತಮುತ್ತ ನಗರಗಳಾಗಿವೆ. ಕಾರಾಗೃಹದಲ್ಲಿ ನೆಟ್ವರ್ಕ್ ಸಿಗದಂತೆ ನೋಡಿಕೊಳ್ಳುವುದೂ ಅನಿವಾರ್ಯ’ ಎಂದರು.</p>.<p>'ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಕಾಯಂ ವೈದ್ಯರು ಇಲ್ಲ. ದೈನಂದಿನ ಸಂಬಳದ ವೈದ್ಯರೊಬ್ಬರು ಭೇಟಿ ನೀಡುತ್ತಾರೆ. ಕೈದಿಗಳಿಗೆ ಮಾನಸಿಕ ಖಿನ್ನತೆ ಜಾಸ್ತಿ ಇರುತ್ತದೆ. ಈಚೆಗೆ ಈ ಜೈಲಿನಲ್ಲಿ ಕೈದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೈದಿಗಳ ಖಿನ್ನತೆ ನಿವಾರಣೆಗೆ ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>‘ಮೊದಲ ಬಾರಿಗೆ ಅಪರಾಧ ಎಸಗಿದವರು, ಯುವ ಕೈದಿಗಳನ್ನು ಪ್ರತ್ಯೇಕವಾಗಿ ಇಡಲು ವ್ಯವಸ್ಥೆ ಮಾಡಲಾಗಿದೆ. ಧಾರವಾಡ ಮತ್ತು ಬೆಳಗಾವಿ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಕಡಿಮೆ ಕೈದಿಗಳು ಇದ್ದಾರೆ. ಬೆಂಗಳೂರು, ಮಂಗಳೂರು, ಗದಗ, ಕೋಲಾರ ಇತರೆಡೆಗಳ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕೈದಿಗಳು ಇದ್ದಾರೆ ಎಂದು ತಿಳಿಸಿದರು.</p>.<p>‘ಜೈಲು ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಈ ಜೈಲಿನಲ್ಲಿ ಈಚೆಗೆ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ’ ಎಂದರು.</p>.<p><strong>‘ಮಾದಕ ಪದಾರ್ಥ; ತೀವ್ರ ನಿಗಾ’</strong></p><p> ಜೈಲಿನಲ್ಲಿ ಮಾದಕ ಪದಾರ್ಥಗಳಿಗೆ ಸಂಬಂಧಿಸಿ ತೀವ್ರ ನಿಗಾ ಇಟ್ಟಿದ್ಧೇವೆ. ಹೊಸ ಕೈದಿಗಳನ್ನು ಬರುವಾಗ ತಪಾಸಣೆ ಮಾಡಿಸುತ್ತೇವೆ. ಸಂಶಯ ಇರುವವರನ್ನು ಪರೀಕ್ಷೆ ಮಾಡಿಸುತ್ತೇವೆ. ಜೈಲಿನಿಂದ ಹೋಗುವಾಗ ಪರೀಕ್ಷೆ ಮಾಡಿಸುತ್ತೇವೆ. ಸೇವನೆ ಮಾಡಿರುವುದು ದೃಢಪಟ್ಟರೆ ಪ್ರಕರಣ ದಾಖಲಿಸುತ್ತೇವೆ’ ಎಂದು ಅಲೋಕ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>