‘ವಿವಿಧ ಜಿಲ್ಲೆಗಳನ್ನು ಹಾದು ಬರುವ ಜಾಥಾವನ್ನು ರೈತ, ಕೃಷಿ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲಿಸಲಿದ್ದು, ಅಲ್ಲಲ್ಲಿ ಸಣ್ಣ ಸಭೆಗಳು ನಡೆಯಲಿದೆ. ಈ ವೇಳೆ ಕೃಷಿ ಬಿಕ್ಕಟ್ಟು ಸೇರಿದಂತೆ ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಜನ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ನೀಡಲಾಗುವುದು. ಅಂತಿಮವಾಗಿ ಮಾರ್ಚ್ 15ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸಮಾರೋಪಗೊಳ್ಳಲಿದೆ’ ಎಂದರು.