<p><strong>ನವಲಗುಂದ</strong>: ಮಕರ ಸಂಕ್ರಾಂತಿ ನಿಮಿತ್ತವಾಗಿ ತಾಲ್ಲೂಕಿನ ಶಿರೂರ ಗ್ರಾಮದಲ್ಲಿ ಮಂಗಳವಾರ ಬಾಲಲೀಲ ಸಂಗಮೇಶ್ವರ ತೆಪ್ಪೋತ್ಸವವು ಅಪಾರ ಸಂಖ್ಯೆಯ ಭಕ್ತರ ಹರ್ಷೊದ್ಘಾರಗಳ ಮಧ್ಯ ಸಂಭ್ರಮದಿಂದ ಜರುಗಿತು.</p>.<p>ತೆಪ್ಪೋತ್ಸವದ ಅಂಗವಾಗಿ ಸಂಗಮೇಶ್ವರ ದೇವನಿಗೆ ವಿಶೇಷ ಅಲಂಕಾರ ಹಾಗೂ ಪೂಜೆ ಮಾಡಲಾಗಿತ್ತು. ಬೆಳಿಗ್ಗೆ ಮಲಪ್ರಭಾ ಬಲದಂಡೆಯ ಕಾಲುವೆಯಲ್ಲಿ ಪವಿತ್ರ ಸ್ನಾನ ಮಾಡಿದರು.</p>.<p>ಸಂಜೆ ನಡೆದ ಬಾಲಲೀಲಾ ಸಂಗಮೇಶ್ವರ ತೆಪೋತ್ಸವದಲ್ಲಿ ಪಾಲ್ಗೊಂಡರು. ತಾವು ತಂದಿದ್ದ ಜೋಳದ ರೊಟ್ಟಿ, ಪಲ್ಯ ಸೇರಿದಂತೆ ವಿವಿಧ ಭೋಜನಗಳನ್ನು ಸವಿದರು.</p>.<p>ಗ್ರಾಮದ ಸುತ್ತಮುತ್ತಲಿನ ಆಯಟ್ಟಿ, ಗುಮ್ಮಗೋಳ, ಬ್ಯಾಲ್ಯಾಳ, ಮೊರಬ, ಗರಗ, ಲೋಕೂರು, ಬೆಟಗೇರಿ, ಹಾರೋಬೇಳವಡಿ, ಇನಾಮಹೊಂಗಲ್, ಅಮ್ಮಿನಭಾವಿ ಸೇರಿದಂತೆ ವಿವಿಧ ಊರುಗಳಿಂದ ಆಗಮಿಸಿದ್ದ ಜನರು ತೆಪ್ಪೋತ್ಸವದಲ್ಲಿ ಭಾಗವಹಿಸಿ, ರಾತ್ರಿ ನಡೆದ ನಾಟಕವನ್ನು ವೀಕ್ಷಿಸಿದರು.</p>.<p>ಜಾತ್ರಾಮಹೋತ್ಸವ ಅಂಗವಾಗಿ ಸೋಮವಾರ ಶಾಲಾ ಮಕ್ಕಳಿಂದ ರಂಗೋಲಿ ಸ್ಪರ್ಧೆ ನಡೆಯಿತು. ಬುಧವಾರ ಟಗರಿನ ಕಾಳಗ, ಕಲ್ಲು ಎತ್ತುವ ಸ್ಪರ್ಧೆಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ಮಕರ ಸಂಕ್ರಾಂತಿ ನಿಮಿತ್ತವಾಗಿ ತಾಲ್ಲೂಕಿನ ಶಿರೂರ ಗ್ರಾಮದಲ್ಲಿ ಮಂಗಳವಾರ ಬಾಲಲೀಲ ಸಂಗಮೇಶ್ವರ ತೆಪ್ಪೋತ್ಸವವು ಅಪಾರ ಸಂಖ್ಯೆಯ ಭಕ್ತರ ಹರ್ಷೊದ್ಘಾರಗಳ ಮಧ್ಯ ಸಂಭ್ರಮದಿಂದ ಜರುಗಿತು.</p>.<p>ತೆಪ್ಪೋತ್ಸವದ ಅಂಗವಾಗಿ ಸಂಗಮೇಶ್ವರ ದೇವನಿಗೆ ವಿಶೇಷ ಅಲಂಕಾರ ಹಾಗೂ ಪೂಜೆ ಮಾಡಲಾಗಿತ್ತು. ಬೆಳಿಗ್ಗೆ ಮಲಪ್ರಭಾ ಬಲದಂಡೆಯ ಕಾಲುವೆಯಲ್ಲಿ ಪವಿತ್ರ ಸ್ನಾನ ಮಾಡಿದರು.</p>.<p>ಸಂಜೆ ನಡೆದ ಬಾಲಲೀಲಾ ಸಂಗಮೇಶ್ವರ ತೆಪೋತ್ಸವದಲ್ಲಿ ಪಾಲ್ಗೊಂಡರು. ತಾವು ತಂದಿದ್ದ ಜೋಳದ ರೊಟ್ಟಿ, ಪಲ್ಯ ಸೇರಿದಂತೆ ವಿವಿಧ ಭೋಜನಗಳನ್ನು ಸವಿದರು.</p>.<p>ಗ್ರಾಮದ ಸುತ್ತಮುತ್ತಲಿನ ಆಯಟ್ಟಿ, ಗುಮ್ಮಗೋಳ, ಬ್ಯಾಲ್ಯಾಳ, ಮೊರಬ, ಗರಗ, ಲೋಕೂರು, ಬೆಟಗೇರಿ, ಹಾರೋಬೇಳವಡಿ, ಇನಾಮಹೊಂಗಲ್, ಅಮ್ಮಿನಭಾವಿ ಸೇರಿದಂತೆ ವಿವಿಧ ಊರುಗಳಿಂದ ಆಗಮಿಸಿದ್ದ ಜನರು ತೆಪ್ಪೋತ್ಸವದಲ್ಲಿ ಭಾಗವಹಿಸಿ, ರಾತ್ರಿ ನಡೆದ ನಾಟಕವನ್ನು ವೀಕ್ಷಿಸಿದರು.</p>.<p>ಜಾತ್ರಾಮಹೋತ್ಸವ ಅಂಗವಾಗಿ ಸೋಮವಾರ ಶಾಲಾ ಮಕ್ಕಳಿಂದ ರಂಗೋಲಿ ಸ್ಪರ್ಧೆ ನಡೆಯಿತು. ಬುಧವಾರ ಟಗರಿನ ಕಾಳಗ, ಕಲ್ಲು ಎತ್ತುವ ಸ್ಪರ್ಧೆಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>