‘ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಉಪವಾಸ ನಿರತರ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾಧಿಕಾರಿ ಸತ್ಯಾಗ್ರಹ ಹಿಂಪಡೆಯಿರಿ ಎನ್ನುತ್ತಿದ್ದಾರೆಯೇ ಹೊರತು, ಖರೀದಿ ಕೇಂದ್ರ ಎಂದು ಆರಂಭಿಸಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಇದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಜಿಲ್ಲೆಯವರೇ ಆದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೆಸರು ಖರೀದಿ ಕೇಂದ್ರಕ್ಕೆ ಒತ್ತಾಯಿಸಿ ಪತ್ರ ಬರೆದರೂ, ಸರ್ಕಾರ ಅವರಿಗೂ ಸ್ಪಂದಿಸಿಲ್ಲ ಎನ್ನುವುದು ಈ ಸರ್ಕಾರದ ವಿಪರ್ಯಾಸ. ಒಂದೊಮ್ಮೆ ಶೀಘ್ರದಲ್ಲಿ ಖರೀದಿ ಕೇಂದ್ರ ಆರಂಭಿಸದಿದ್ದಲ್ಲಿ ರೈತ ಸಂಘಗಳೊಂದಿಗೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.