ಹುಬ್ಬಳ್ಳಿ: ‘ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಹತ್ತು ದಿನದ ಒಳಗೆ ದುರಸ್ತಿ ಮಾಡಬೇಕು. ಇಲ್ಲದಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಪಕ್ಷದ ಕಾರ್ಯಕರ್ತರೊಂದಿಗೆ ಉಪವಾಸ ಧರಣಿ ಆರಂಭಿಸಲಾಗುವುದು’ ಎಂದು ನಗರದ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ರಾಜು ನಾಯಕವಾಡಿ ಎಚ್ಚರಿಸಿದರು.