ಹುಬ್ಬಳ್ಳಿ: ‘ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಂದ ಗೃಹ ಖಾತೆಯನ್ನು ಕಿತ್ತುಕೊಂಡಿದ್ದರಿಂದ ದಲಿತರಿಗೆ ಅನ್ಯಾಯವಾಗಿದೆ ಎನ್ನುವ ಮೂಲಕ ಜೆಡಿಎಸ್ನ ಎಚ್.ಡಿ. ರೇವಣ್ಣ ಅವರು ದಲಿತರ ಬಗ್ಗೆ ಕಾಳಜಿ ತೋರಿಸಿದ್ದು ಶ್ಲಾಘನೀಯ. ಆದರೆ, ನಮ್ಮ ಪಕ್ಷದತ್ತ ಬೆಟ್ಟು ಮಾಡುವ ಬದಲು ತಮ್ಮದೇ ಪಕ್ಷದಿಂದ ದಲಿತರನ್ನು ಸಚಿವರನ್ನಾಗಿ ಮಾಡಿ ತೋರಿಸಲಿ’ ಎಂದು ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ ಸವಾಲು ಹಾಕಿದರು.