<p><strong>ಅಣ್ಣಿಗೇರಿ:</strong> ರಾಜ್ಯದಲ್ಲಿನ ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಜೆಡಿಎಸ್ ಆಯೋಜಿಸಿರುವ ಜನತಾ ಜಲಧಾರೆ ಕಾರ್ಯಕ್ರಮದ ರಥ ಸೋಮವಾರ ಪಟ್ಟಣಕ್ಕೆ ಆಗಮಿಸಿತು. ಸ್ಥಳೀಯರು ಅದ್ಧೂರಿಯಾಗಿ ಸ್ವಾಗತಿಸಿದರು.</p>.<p>ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ನೇತೃತ್ವದಲ್ಲಿ ಹಮ್ಮಿಕೊಂಡ ಜನತಾ ಜಲಧಾರೆ ರಥಕ್ಕೆ ಜಿಲ್ಲಾಧ್ಯಕ್ಷ ಬಿ.ಬಿ.ಗಂಗಾಧರಮಠ ಚಾಲನೆ ನೀಡಿದರು. ರಾಜ್ಯದಲ್ಲಿ ನನೆಗುದಿಗೆ ಬಿದ್ದ ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ಉತ್ತಮ ಆಡಳಿತ ಬೇಕಾಗಿದೆ. ಆದ್ದರಿಂದ ಈ ಬಾರಿ ಜೆಡಿಎಸ್ಗೆ ಪ್ರತಿಯೊಬ್ಬರೂ ಮತ ನೀಡುವ ಮೂಲಕ ಬೆಂಬಲಿಸಿ ಎಂದು ಪ್ರಕಾಶ ಅಂಗಡಿ ಮನವಿ ಮಾಡಿದರು.</p>.<p>ಮುಖಂಡರಾದ ಗುರುರಾಜ ಹುಣಶಿಮರದ, ಡಿ.ಎಂ.ಶಲವಡಿ, ಶ್ರೀಶೈಲಯ್ಯ ಮೂಲಿಮನಿ, ನಾರಾಯಣ ಮಾಡಳ್ಳಿ, ಬಸಮ್ಮ ಅಂಗಡಿ, ಶಿವಶಂಕರ ಕಲ್ಲೂರ, ವಿರೇಶ ಶಾನುಭೋಗರ, ವಿರೇಶ ಕುಬಸದ, ಜಿ.ಎನ್.ತೋಟದ, ಹಟೇಲಸಾಬ ಗಾಡಗೋಳಿ, ದಸಗೀರಸಾಬ ಸಂಗಟಿ, ಸಂಗಪ್ಪ ಅಂಗಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ:</strong> ರಾಜ್ಯದಲ್ಲಿನ ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಜೆಡಿಎಸ್ ಆಯೋಜಿಸಿರುವ ಜನತಾ ಜಲಧಾರೆ ಕಾರ್ಯಕ್ರಮದ ರಥ ಸೋಮವಾರ ಪಟ್ಟಣಕ್ಕೆ ಆಗಮಿಸಿತು. ಸ್ಥಳೀಯರು ಅದ್ಧೂರಿಯಾಗಿ ಸ್ವಾಗತಿಸಿದರು.</p>.<p>ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ನೇತೃತ್ವದಲ್ಲಿ ಹಮ್ಮಿಕೊಂಡ ಜನತಾ ಜಲಧಾರೆ ರಥಕ್ಕೆ ಜಿಲ್ಲಾಧ್ಯಕ್ಷ ಬಿ.ಬಿ.ಗಂಗಾಧರಮಠ ಚಾಲನೆ ನೀಡಿದರು. ರಾಜ್ಯದಲ್ಲಿ ನನೆಗುದಿಗೆ ಬಿದ್ದ ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ಉತ್ತಮ ಆಡಳಿತ ಬೇಕಾಗಿದೆ. ಆದ್ದರಿಂದ ಈ ಬಾರಿ ಜೆಡಿಎಸ್ಗೆ ಪ್ರತಿಯೊಬ್ಬರೂ ಮತ ನೀಡುವ ಮೂಲಕ ಬೆಂಬಲಿಸಿ ಎಂದು ಪ್ರಕಾಶ ಅಂಗಡಿ ಮನವಿ ಮಾಡಿದರು.</p>.<p>ಮುಖಂಡರಾದ ಗುರುರಾಜ ಹುಣಶಿಮರದ, ಡಿ.ಎಂ.ಶಲವಡಿ, ಶ್ರೀಶೈಲಯ್ಯ ಮೂಲಿಮನಿ, ನಾರಾಯಣ ಮಾಡಳ್ಳಿ, ಬಸಮ್ಮ ಅಂಗಡಿ, ಶಿವಶಂಕರ ಕಲ್ಲೂರ, ವಿರೇಶ ಶಾನುಭೋಗರ, ವಿರೇಶ ಕುಬಸದ, ಜಿ.ಎನ್.ತೋಟದ, ಹಟೇಲಸಾಬ ಗಾಡಗೋಳಿ, ದಸಗೀರಸಾಬ ಸಂಗಟಿ, ಸಂಗಪ್ಪ ಅಂಗಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>