ಪ್ರತಿಭಟನಾಕಾರರು ಅಂಬೇಡ್ಕರ್ ವೃತ್ತದಿಂದ ಲ್ಯಾಮಿಂಗ್ಟನ್ ರಸ್ತೆ, ರಾಯಣ್ಣ ವೃತ್ತ, ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತದ ಮೂಲಕ ಸಾಗಿ ಪುನಃ ರಾಯಣ್ಣ ವೃತ್ತಕ್ಕೆ ಬಂದು ಸಾಂಕೇತಿಕ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯುದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.