ಹುಬ್ಬಳ್ಳಿ: ಸಂಯುಕ್ತ ಜನತಾದಳವು (ಜೆಡಿಯು) ರಾಷ್ಟ್ರಮಟ್ಟದಲ್ಲಿ ಮಹಾಘಟಬಂಧನದ ಪಾಲುದಾರ ಪಕ್ಷವಾಗಿದೆ. ಹೀಗಾಗಿ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕಿದೆ. ಆದರೆ, ಕಾಂಗ್ರೆಸ್ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಜೆಡಿಯುನಿಂದಲೇ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲಗೌಡ ಕಮತರ ಹೇಳಿದರು.