‘ಕುವೆಂಪು ಹಾಗೂ ಬೇಂದ್ರೆ ಅವರನ್ನು ಕನ್ನಡಾಂಬೆಯ ಎರಡು ಕಣ್ಣುಗಳಿದ್ದಂತೆ ಎಂದು ಬಣ್ಣಿಸಲಾಗಿದೆ. ಆದರೆ ಅನುದಾನ ಹಂಚಿಕೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಹಾಗೂ ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ವರಕವಿ ಅವರ ಜನ್ಮದಿನವನ್ನು ‘ವಿಶ್ವ ಕವಿ ದಿನ’ ಎಂದು ಘೋಷಿಸುವಂತೆ ಕಳೆದ ಮೂರು ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಬರಲಾಗಿದೆ. ಹೀಗಿದ್ದರೂ ಅದನ್ನು ಸರ್ಕಾರ ಪರಿಗಣಿಸದಿರುವುದು ಬೇಸರದ ಸಂಗತಿ’ ಎಂದು ಡಾ. ಹಿರೇಮಠ ಹೇಳಿದರು.