ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನಯಜ್ಞ ಸಪ್ತಾಹ ಇಂದಿನಿಂದ

Last Updated 5 ಜನವರಿ 2022, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತಾಲ್ಲೂಕಿನ ಹೆಬಸೂರು ಗ್ರಾಮದಲ್ಲಿ ಜ. 6ರಿಂದ 8ರ ವರೆಗೆ ಸಮರ್ಥ ಭೀಮಾನಂದ ಮಹಾರಾಜರ 18ನೇ ವರ್ಷದ ಪುಣ್ಯತಿಥಿ ಅಂಗವಾಗಿ ಸರ್ವಧರ್ಮ ಸಮನ್ವಯ ಆಧ್ಯಾತ್ಮಿಕ ಜ್ಞಾನಯಜ್ಞ ಸಪ್ತಾಹ ಕಾರ್ಯಕ್ರಮ ನಡೆಯಲಿದೆ.

6ರಂದು ಬೆಳಿಗ್ಗೆ 11 ಗಂಟೆಗೆ ದಾಸಬೋಧ ಪೂಜೆ, ವೀಣಾ ಪೂಜೆ ಮತ್ತು ಸಮರ್ಥ ಕಲ್ಮೇಶ್ವರ ಮಹಾರಾಜರ ಚರಿತ್ರೆ ಪೂಜೆ ಜರುಗಲಿದೆ. ಪೋತಿ ಸ್ಥಾಪನೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಪ್ರಕಾಶ ಮಹಾರಾಜರು ಸಾನ್ನಿಧ್ಯ ವಹಿಸುವರು.

7ರಂದು ಸಂಜೆ 5 ಗಂಟೆಗೆ ಪಲ್ಲಕ್ಕಿ ಪೂಜೆ, ಹೆಬಸೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ಹಾಗೂ ಪ್ರವಚನ ನಡೆಯಲಿದೆ. 8ರಂದು ಬೆಳಿಗ್ಗೆ 11 ಗಂಟೆಗೆ ಭೀಮಾನಂದ ಮಹಾರಾಜರ ಮೂರ್ತಿಗೆ ವಿಶೇಷ ಪೂಜೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT