<p><strong>ಧಾರವಾಡ</strong>: ‘ಹುಬ್ಬಳ್ಳಿಯ ಉದ್ಯೋಗ ಮಾಹಿತಿ ಹಾಗೂ ತರಬೇತಿ ಕೇಂದ್ರ, ಕೌಶಲಾಭಿವೃದ್ಧಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನಗರದಲ್ಲಿ ಜೂನ್ 30 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ತರಬೇತಿ ಕೇಂದ್ರದ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವಾಜಿ ವೃತ್ತದ ಬಳಿಯ ಕೆ.ಇ. ಬೋರ್ಡ್ ಪ್ರಥಮದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10.30ಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟನೆ ನೆರೆವೇರಿಸುವರು’ ಎಂದರು.</p>.<p>‘ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ ಮಸೂತಿ ಪಾಲ್ಗೊಳ್ಳುವರು. ಕೆ.ಇ. ಬೋರ್ಡ್ ಸಂಸ್ಥೆಯ ಕಾರ್ಯಾಧ್ಯಕ್ಷ ಎಸ್.ಟಿ. ಪಾಟೀಲ ಅಧ್ಯಕ್ಷತೆ ವಹಿಸುವರು’ ಎಂದು ಹೇಳಿದರು.</p>.<p>‘ಅಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ಎಂಟು ನೋಂದಣಿಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಕಾಲೇಜಿನ 18 ಕೊಠಡಿಗಳಲ್ಲಿ ಸಂದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಹೇಳಿದರು.</p>.<p>‘ಉದ್ಯೋಗಮೇಳದಲ್ಲಿ ಬೆಂಗಳೂರು, ಪುನಾ, ಹೈದರಾಬಾದ್, ಕೇರಳ, ಬೆಳಗಾವಿಯ 51 ಕಂಪನಿಗಳು ಭಾಗವಹಿಸಲಿವೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಶಿಕ್ಷಣ ಪೂರ್ಣಗೊಳಿಸಿದವರು ಪಾಲ್ಗೊಳ್ಳಬಹುದು. ಹೊರ ಜಿಲ್ಲೆಗಳ ಅಭ್ಯರ್ಥಿಗಳೂ ಭಾಗವಹಿಸಬಹುದು’ ಎಂದರು.</p>.<p>ಕೆ.ಇ.ಬೋರ್ಡ್ ಸಂಸ್ಥೆ ಕಾರ್ಯದರ್ಶಿ ಡಿ.ಎಸ್. ರಾಜಪುರೋಹಿತ, ಪ್ರಾಚಾರ್ಯ ಮೋಹನ ಸಿದ್ಧಾಂತಿ, ಸುನೀತಾ ಪುರೋಹಿತ, ಎಸ್.ಎಲ್. ಶೇಖರಗೋಳ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಹುಬ್ಬಳ್ಳಿಯ ಉದ್ಯೋಗ ಮಾಹಿತಿ ಹಾಗೂ ತರಬೇತಿ ಕೇಂದ್ರ, ಕೌಶಲಾಭಿವೃದ್ಧಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನಗರದಲ್ಲಿ ಜೂನ್ 30 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ತರಬೇತಿ ಕೇಂದ್ರದ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವಾಜಿ ವೃತ್ತದ ಬಳಿಯ ಕೆ.ಇ. ಬೋರ್ಡ್ ಪ್ರಥಮದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10.30ಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟನೆ ನೆರೆವೇರಿಸುವರು’ ಎಂದರು.</p>.<p>‘ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ ಮಸೂತಿ ಪಾಲ್ಗೊಳ್ಳುವರು. ಕೆ.ಇ. ಬೋರ್ಡ್ ಸಂಸ್ಥೆಯ ಕಾರ್ಯಾಧ್ಯಕ್ಷ ಎಸ್.ಟಿ. ಪಾಟೀಲ ಅಧ್ಯಕ್ಷತೆ ವಹಿಸುವರು’ ಎಂದು ಹೇಳಿದರು.</p>.<p>‘ಅಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ಎಂಟು ನೋಂದಣಿಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಕಾಲೇಜಿನ 18 ಕೊಠಡಿಗಳಲ್ಲಿ ಸಂದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಹೇಳಿದರು.</p>.<p>‘ಉದ್ಯೋಗಮೇಳದಲ್ಲಿ ಬೆಂಗಳೂರು, ಪುನಾ, ಹೈದರಾಬಾದ್, ಕೇರಳ, ಬೆಳಗಾವಿಯ 51 ಕಂಪನಿಗಳು ಭಾಗವಹಿಸಲಿವೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಶಿಕ್ಷಣ ಪೂರ್ಣಗೊಳಿಸಿದವರು ಪಾಲ್ಗೊಳ್ಳಬಹುದು. ಹೊರ ಜಿಲ್ಲೆಗಳ ಅಭ್ಯರ್ಥಿಗಳೂ ಭಾಗವಹಿಸಬಹುದು’ ಎಂದರು.</p>.<p>ಕೆ.ಇ.ಬೋರ್ಡ್ ಸಂಸ್ಥೆ ಕಾರ್ಯದರ್ಶಿ ಡಿ.ಎಸ್. ರಾಜಪುರೋಹಿತ, ಪ್ರಾಚಾರ್ಯ ಮೋಹನ ಸಿದ್ಧಾಂತಿ, ಸುನೀತಾ ಪುರೋಹಿತ, ಎಸ್.ಎಲ್. ಶೇಖರಗೋಳ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>