ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ: ಪರಿಷ್ಕೃತ ಪ್ರಸ್ತಾವ ಕಳುಹಿಸಲು ಜೋಶಿ ಸೂಚನೆ

Last Updated 28 ಆಗಸ್ಟ್ 2020, 16:45 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅವಳಿ ನಗರಗಳ ನಡುವಿನ ಬೈಪಾಸ್‌ ರಸ್ತೆಯ ಕಾಮಗಾರಿಯ ಪರಿಷ್ಕೃತ ಪ್ರಸ್ತಾವವನ್ನು ಆದಷ್ಟು ಬೇಗನೆ ಕೇಂದ್ರ ಕಚೇರಿಗೆ ಕಳುಹಿಸಬೇಕು. ಈ ಕುರಿತು ನಿತಿನ್‌ ಗಡ್ಕರಿ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಶುಕ್ರವಾರ ಬೆಂಗಳೂರಿನಲ್ಲಿ ಬೈಪಾಸ್ ರಸ್ತೆಯ ಉನ್ನತೀಕರಣದ ಸಭೆ ನಡೆಸಿದ ಅವರು ಈ ಕಾಮಗಾರಿಗೆ ಇದ್ದ ತಾಂತ್ರಿಕ ಸಮಸ್ಯೆಗಳನ್ನು ಸಹಮತದೊಂದಿಗೆ ಪರಿಹರಿಸಿ, ಮೂರು ವರ್ಷಗಳಲ್ಲಿ ಷಟ್ಪಥ ರಸ್ತೆ ಹಾಗು ಪಕ್ಕದಲ್ಲಿ ಸರ್ವಿಸ್ ರಸ್ತೆ ಮಾಡಿ ಅಭಿವೃದ್ಧಿಗೊಳಿಸಬೇಕು ಎಂದು ಸೂಚಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌, ಶಾಸಕ ಅಮೃತ ದೇಸಾಯಿ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT