<p><strong>ತೆಕ್ಕಲಕೋಟೆ</strong>: ಇಲ್ಲಿನ ಹೋಬಳಿ ವ್ಯಾಪ್ತಿಯ ಕರೂರು, ತಾಳೂರು, ಬೂದುಗುಪ್ಪ, ಮುದ್ದಟನೂರು, ಅರಳಿಗನೂರು ಗ್ರಾಮಗಳ ಕೃಷಿ ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ಬುಧವಾರದಿಂದ ಜೋಳ ಖರೀದಿ ನೋಂದಣಿಗೆ ಕೇಂದ್ರಗಳನ್ನು ತೆರೆಯಲಾಗಿದ್ದು, ನೋಂದಣಿಗೆ ರೈತರು ಮುಗಿಬಿದ್ದರು.</p>.<p>ಬೂದುಗುಪ್ಪ ಕೃಷಿ ಪ್ರಾಥಮಿಕ ಸಹಕಾರಿ ಸಂಘದಲ್ಲಿ ಬಲಕುಂದಿ, ಗೋಸಬಾಳು ಗ್ರಾಮಗಳ ರೈತರಿಗೆ ನೋಂದಣಿ ಮಾಡುವುದಿಲ್ಲ ಎಂದು ರೈತರನ್ನು ಮರಳಿ ಕಳುಹಿಸಿದ ಘಟನೆ ನಡೆಯಿತು.</p>.<p>ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಸಿರುಗುಪ್ಪ ಎಪಿಎಂಸಿ ಮಾಜಿ ಅಧ್ಯಕ್ಷ ಶರಣಬಸವ, ‘ರೈತರು ನೋಂದಣಿಗಾಗಿ ಬೆಳಿಗ್ಗೆ 4 ಗಂಟೆಗೆ ಗ್ರಾಮಗಳಿಂದ ಬಂದು ಸರತಿ ಸಾಲಿನಲ್ಲಿ ನಿಂತಿದ್ದು, 11 ಗಂಟೆಗೆ ಎರಡೂ ಗ್ರಾಮಗಳ ನೂರಾರು ರೈತರನ್ನು ವಾಪಸ್ಸು ಕಳುಹಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕರೂರು ಮತ್ತು ತಾಳೂರು ಜೋಳ ಖರೀದಿ ನೋಂದಣಿ ಕೇಂದ್ರಗಳಲ್ಲಿ ರೈತರು ಭಾರೀ ಸಂಖ್ಯೆಯಲ್ಲಿ ಸೇರಿದ್ದರಿಂದ ಕೆಲ ಕಾಲ ನೂಕುನುಗ್ಗಲು ಉಂಟಾಯಿತು.</p>.<p>‘ಮುಂಗಾರು ಹಂಗಾಮಿನಲ್ಲಿ ಬೆಳೆದ ಜೋಳ ಖರೀದಿಗೆ ತಾಲ್ಲೂಕಿನ 9 ಕಡೆ ಖರೀದಿ ಕೇಂದ್ರ ತೆರೆದಿದ್ದು, ಬುಧವಾರದಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಿರುಗುಪ್ಪ ತಹಶೀಲ್ದಾರ್ ಗೌಸಿಯ ಬೇಗಂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ</strong>: ಇಲ್ಲಿನ ಹೋಬಳಿ ವ್ಯಾಪ್ತಿಯ ಕರೂರು, ತಾಳೂರು, ಬೂದುಗುಪ್ಪ, ಮುದ್ದಟನೂರು, ಅರಳಿಗನೂರು ಗ್ರಾಮಗಳ ಕೃಷಿ ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ಬುಧವಾರದಿಂದ ಜೋಳ ಖರೀದಿ ನೋಂದಣಿಗೆ ಕೇಂದ್ರಗಳನ್ನು ತೆರೆಯಲಾಗಿದ್ದು, ನೋಂದಣಿಗೆ ರೈತರು ಮುಗಿಬಿದ್ದರು.</p>.<p>ಬೂದುಗುಪ್ಪ ಕೃಷಿ ಪ್ರಾಥಮಿಕ ಸಹಕಾರಿ ಸಂಘದಲ್ಲಿ ಬಲಕುಂದಿ, ಗೋಸಬಾಳು ಗ್ರಾಮಗಳ ರೈತರಿಗೆ ನೋಂದಣಿ ಮಾಡುವುದಿಲ್ಲ ಎಂದು ರೈತರನ್ನು ಮರಳಿ ಕಳುಹಿಸಿದ ಘಟನೆ ನಡೆಯಿತು.</p>.<p>ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಸಿರುಗುಪ್ಪ ಎಪಿಎಂಸಿ ಮಾಜಿ ಅಧ್ಯಕ್ಷ ಶರಣಬಸವ, ‘ರೈತರು ನೋಂದಣಿಗಾಗಿ ಬೆಳಿಗ್ಗೆ 4 ಗಂಟೆಗೆ ಗ್ರಾಮಗಳಿಂದ ಬಂದು ಸರತಿ ಸಾಲಿನಲ್ಲಿ ನಿಂತಿದ್ದು, 11 ಗಂಟೆಗೆ ಎರಡೂ ಗ್ರಾಮಗಳ ನೂರಾರು ರೈತರನ್ನು ವಾಪಸ್ಸು ಕಳುಹಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕರೂರು ಮತ್ತು ತಾಳೂರು ಜೋಳ ಖರೀದಿ ನೋಂದಣಿ ಕೇಂದ್ರಗಳಲ್ಲಿ ರೈತರು ಭಾರೀ ಸಂಖ್ಯೆಯಲ್ಲಿ ಸೇರಿದ್ದರಿಂದ ಕೆಲ ಕಾಲ ನೂಕುನುಗ್ಗಲು ಉಂಟಾಯಿತು.</p>.<p>‘ಮುಂಗಾರು ಹಂಗಾಮಿನಲ್ಲಿ ಬೆಳೆದ ಜೋಳ ಖರೀದಿಗೆ ತಾಲ್ಲೂಕಿನ 9 ಕಡೆ ಖರೀದಿ ಕೇಂದ್ರ ತೆರೆದಿದ್ದು, ಬುಧವಾರದಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಿರುಗುಪ್ಪ ತಹಶೀಲ್ದಾರ್ ಗೌಸಿಯ ಬೇಗಂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>