‘ವಿಧಾನಸೌಧದ ಮುಂದೆ ಪಾಕಿಸ್ತಾನ್ ಜಿಂದಾಬಾದ್ ಎಂದೂ ಕೂಗಿದವರ ವಿರುದ್ಧ ಹಾಗೂ ತಮ್ಮದೇ ಪಕ್ಷದ ಹು–ಧಾ ಮಹಾನಗರ ಪಾಲಿಕೆ ಸದಸ್ಯರ ಮಗಳ ಹತ್ಯೆ ಮಾಡಿದವನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ. ಕಡೇಪಕ್ಷ ಖಂಡನೆಯನ್ನೂ ವ್ಯಕ್ತಪಡಿಸದೆ, ಬೇಜವಾಬ್ದಾರಿ ಹೇಳಿಕೆ ನೀಡಿ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನವರಿಗೆ ನಾಚಿಕೆ ಆಗುವುದಿಲ್ಲವೇ?’ ಎಂದು ವಾಗ್ದಾಳಿ ನಡೆಸಿದರು.