ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಡಿಸಿಪಿಯಾಗಿ ರಾಮರಾಜನ್

Last Updated 18 ನವೆಂಬರ್ 2020, 11:10 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅವಳಿನಗರ ಪೊಲೀಸ್ ಕಮಿಷನರೇಟ್‌ನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕೆ. ರಾಮರಾಜನ್ ಅವರನ್ನು ಒಒಡಿ ಮೇಲೆ ನಿಯೋಜಿಸಿ, ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿರುವ ರಾಮರಾಜನ್ ಅವರಿಗೆ, ಮುಂದಿನ ಆದೇಶದವರೆಗೆ ಈ ಹುದ್ದೆಯಲ್ಲಿ ಮುಂದುವರಿಯುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಸದ್ಯ ಖಾಲಿ ಇದ್ದ ಡಿಸಿಪಿ ಹುದ್ದೆಯ ಹೆಚ್ಚುವರಿ ಹೊಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್ ಅವರಿಗೆ ವಹಿಸಲಾಗಿತ್ತು. ಇದೀಗ ಆ ಜಾಗಕ್ಕೆ ಬಂದಿರುವ ರಾಮರಾಜನ್ ತಮಿಳುನಾಡಿನವರಾಗಿದ್ದು, 2017ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT