<p><strong>ಹುಬ್ಬಳ್ಳಿ: ‘</strong>ಎರಡನೇ ಹಂತದ ನಗರಗಳತ್ತ ಉದ್ಯಮಗಳು ಮುಖ ಮಾಡುತ್ತಿದ್ದು, ಭವಿಷ್ಯದಲ್ಲಿ ಹುಬ್ಬಳ್ಳಿ ದೊಡ್ಡ ಕೈಗಾರಿಕಾ ನಗರಿಯಾಗಿ ಹೊರಹೊಮ್ಮಲಿದೆ’ ಎಂದು ನಿರಾಣಿ ಗ್ರೂಪ್ನ ಸಂಗಮೇಶ ನಿರಾಣಿ ಹೇಳಿದರು.</p>.<p>ಇಲ್ಲಿನ ಅಮರಗೋಳ ಎಪಿಎಂಸಿ ಆವರಣದಲ್ಲಿನ ಹುಬ್ಬಳ್ಳಿ–ಧಾರವಾಡ ವಿವಿಧೋದ್ದೇಶ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಲ್ವ್ ತಯಾರಕರ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಮೂರು ದಿನಗಳ ‘ವಾಲ್ಸ್ ಎಕ್ಸ್ –2026’ ವಾಲ್ವ್ ಮತ್ತು ಪಂಪ್ ಪ್ರದರ್ಶನದಲ್ಲಿ ಅವರು ಮಾತನಾಡಿದರು. </p>.<p>‘ಇಲ್ಲಿಯೇ ಓದಿ ವಿಶ್ವದ ಶ್ರೇಷ್ಠ ಎಂಜಿನಿಯರ್ ಎನಿಸಿಕೊಂಡವರು ಹುಬ್ಬಳ್ಳಿಯಲ್ಲೇ ಉಳಿದಿದ್ದರೆ ಇದು ಐಟಿ ಸಿಟಿ ಆಗುತ್ತಿತ್ತು. ವಾಲ್ವ್ ಹಾಗೂ ಪಂಪ್ ಉತ್ಪಾದನೆಗೆ ನಗರ ಪ್ರಖ್ಯಾತಿ ಪಡೆದಿದ್ದು, ಯುವಜನರು ಸ್ವಂತ ಉದ್ಯಮ ಆರಂಭಿಸಿ ಯಶಸ್ಸು ಸಾಧಿಸಬೇಕು’ ಎಂದು ಸಲಹೆ ನೀಡಿದರು. </p>.<p>ಶಿವಮೊಗ್ಗದ ಶಾಂತಲಾ ಗ್ರೂಪ್ನ ರುದ್ರೇಗೌಡ ಮಾತನಾಡಿ, ‘ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಇಂತಹ ವಸ್ತುಪ್ರದರ್ಶನಗಳು ನಿರಂತರವಾಗಿ ನಡೆಯುತ್ತವೆ. ಇಲ್ಲಿ ಪರಸ್ಪರ ಸಂವಾದ, ಉಪನ್ಯಾಸಗಳ ಮೂಲಕ ಗೊಂದಲ ಪರಿಹರಿಸಿಕೊಂಡು, ಉದ್ಯಮದಲ್ಲಿ ಸಾಧನೆ ಮಾಡಬಹುದು’ ಎಂದು ಅಭಿಪ್ರಾಯಪಟ್ಟರು. </p>.<p>ಉದ್ಯಮಿ ವಿಜಯ ಸಂಕೇಶ್ವರ ಮಾತನಾಡಿ, ‘ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವಸ್ತುಗಳನ್ನು ತಯಾರಿಸಬೇಕು. ಈ ಮೂಲಕ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು. ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳಲು ಇದು ರಹದಾರಿ’ ಎಂದರು.</p>.<p>ಮೈಕ್ರೊಫಿನಿಷ್ ವಾಲ್ವ್ ಕಂಪನಿಯ ಸಂಸ್ಥಾಪಕ ತಿಲಕ ವಿಕಂಶಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು. </p>.<p>ಶಿವಾನಂದ ಆವಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಇಲಾಖೆ ಜಂಟಿ ನಿರ್ದೇಶಕ ಶಶಿಕುಮಾರ ಎಂ., ಅವರು ಇಲಾಖೆಯ ಸೌಲಭ್ಯಗಳ ಬಗ್ಗೆ ವಿವರಿಸಿದರು.</p>.<p>ಮಹದೇವ ಕರಮರಿ, ನಾಗರಾಜ ದಿವಟೆ, ಅನಿಶ ಅಹ್ಮದ, ಮಹಾಂತೇಶ ದಳವಾಯಿ, ಮಹೇಂದ್ರ ವಿಕಂಶಿ, ವಿ.ಜಿ. ಚಿಲ್ಲಾಳ, ಸಂಗಮೇಶ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: ‘</strong>ಎರಡನೇ ಹಂತದ ನಗರಗಳತ್ತ ಉದ್ಯಮಗಳು ಮುಖ ಮಾಡುತ್ತಿದ್ದು, ಭವಿಷ್ಯದಲ್ಲಿ ಹುಬ್ಬಳ್ಳಿ ದೊಡ್ಡ ಕೈಗಾರಿಕಾ ನಗರಿಯಾಗಿ ಹೊರಹೊಮ್ಮಲಿದೆ’ ಎಂದು ನಿರಾಣಿ ಗ್ರೂಪ್ನ ಸಂಗಮೇಶ ನಿರಾಣಿ ಹೇಳಿದರು.</p>.<p>ಇಲ್ಲಿನ ಅಮರಗೋಳ ಎಪಿಎಂಸಿ ಆವರಣದಲ್ಲಿನ ಹುಬ್ಬಳ್ಳಿ–ಧಾರವಾಡ ವಿವಿಧೋದ್ದೇಶ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಲ್ವ್ ತಯಾರಕರ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಮೂರು ದಿನಗಳ ‘ವಾಲ್ಸ್ ಎಕ್ಸ್ –2026’ ವಾಲ್ವ್ ಮತ್ತು ಪಂಪ್ ಪ್ರದರ್ಶನದಲ್ಲಿ ಅವರು ಮಾತನಾಡಿದರು. </p>.<p>‘ಇಲ್ಲಿಯೇ ಓದಿ ವಿಶ್ವದ ಶ್ರೇಷ್ಠ ಎಂಜಿನಿಯರ್ ಎನಿಸಿಕೊಂಡವರು ಹುಬ್ಬಳ್ಳಿಯಲ್ಲೇ ಉಳಿದಿದ್ದರೆ ಇದು ಐಟಿ ಸಿಟಿ ಆಗುತ್ತಿತ್ತು. ವಾಲ್ವ್ ಹಾಗೂ ಪಂಪ್ ಉತ್ಪಾದನೆಗೆ ನಗರ ಪ್ರಖ್ಯಾತಿ ಪಡೆದಿದ್ದು, ಯುವಜನರು ಸ್ವಂತ ಉದ್ಯಮ ಆರಂಭಿಸಿ ಯಶಸ್ಸು ಸಾಧಿಸಬೇಕು’ ಎಂದು ಸಲಹೆ ನೀಡಿದರು. </p>.<p>ಶಿವಮೊಗ್ಗದ ಶಾಂತಲಾ ಗ್ರೂಪ್ನ ರುದ್ರೇಗೌಡ ಮಾತನಾಡಿ, ‘ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಇಂತಹ ವಸ್ತುಪ್ರದರ್ಶನಗಳು ನಿರಂತರವಾಗಿ ನಡೆಯುತ್ತವೆ. ಇಲ್ಲಿ ಪರಸ್ಪರ ಸಂವಾದ, ಉಪನ್ಯಾಸಗಳ ಮೂಲಕ ಗೊಂದಲ ಪರಿಹರಿಸಿಕೊಂಡು, ಉದ್ಯಮದಲ್ಲಿ ಸಾಧನೆ ಮಾಡಬಹುದು’ ಎಂದು ಅಭಿಪ್ರಾಯಪಟ್ಟರು. </p>.<p>ಉದ್ಯಮಿ ವಿಜಯ ಸಂಕೇಶ್ವರ ಮಾತನಾಡಿ, ‘ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವಸ್ತುಗಳನ್ನು ತಯಾರಿಸಬೇಕು. ಈ ಮೂಲಕ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು. ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳಲು ಇದು ರಹದಾರಿ’ ಎಂದರು.</p>.<p>ಮೈಕ್ರೊಫಿನಿಷ್ ವಾಲ್ವ್ ಕಂಪನಿಯ ಸಂಸ್ಥಾಪಕ ತಿಲಕ ವಿಕಂಶಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು. </p>.<p>ಶಿವಾನಂದ ಆವಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಇಲಾಖೆ ಜಂಟಿ ನಿರ್ದೇಶಕ ಶಶಿಕುಮಾರ ಎಂ., ಅವರು ಇಲಾಖೆಯ ಸೌಲಭ್ಯಗಳ ಬಗ್ಗೆ ವಿವರಿಸಿದರು.</p>.<p>ಮಹದೇವ ಕರಮರಿ, ನಾಗರಾಜ ದಿವಟೆ, ಅನಿಶ ಅಹ್ಮದ, ಮಹಾಂತೇಶ ದಳವಾಯಿ, ಮಹೇಂದ್ರ ವಿಕಂಶಿ, ವಿ.ಜಿ. ಚಿಲ್ಲಾಳ, ಸಂಗಮೇಶ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>