ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ದಾಳಿಗೆ ಆಕಳ ಕರು ಬಲಿ

Last Updated 16 ಫೆಬ್ರುವರಿ 2020, 15:07 IST
ಅಕ್ಷರ ಗಾತ್ರ

ಕಲಘಟಗಿ: ತಾಲ್ಲೂಕಿನ ಬೆಂಡಲಗಟ್ಟಿ ಗ್ರಾಮದಲ್ಲಿ ಶನಿವಾರ ರಾತ್ರಿ ಚಿರತೆಯೊಂದು ದಾಳಿ ಮಾಡಿ ಆಕಳ ಕರುವನ್ನು ಎಳೆದೊಯ್ದು ತಿಂದು ಹಾಕಿದೆ.

ಕಲಘಟಗಿ ಪಟ್ಟಣದ ಸಮೀಪ ಇರುವ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಹುಲಗಿನಕಟ್ಟಿ ಗ್ರಾಮದ ಶಾಂತವ್ವ ಹನುಮಂತಪ್ಪ ಭಜಂತ್ರಿ ಅವರಿಗೆ ಸೇರಿದ ಹೊಲದ ಗುಡಿಸಿಲಿನಲ್ಲಿ ಎರಡು ಆಕಳು ಇದ್ದವು, ಅದರಲ್ಲಿ ಆಕಳ ಕರುವನ್ನು ಚಿರತೆ ತಿಂದು ಹಾಕಿದೆ.

ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪ‍ರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ದಾಳಿ ನಡೆಸಿರುವುದನ್ನು ಖಚಿತ ಪಡಿಸಿದರು.

ಚಿರತೆಯನ್ನು ಹಿಡಿದು ಬೇರೆ ಕಡೆ ಸಾಗಿಸಬೇಕು ಎಂದು ಗ್ರಾಮಸ್ಥರಾದ ಗಿರೀಶ ಭಜಂತ್ರಿ, ಪ್ರಭುಜನ ಹುಲಿಕಟ್ಟಿ, ನವೀನ ಹುಲಿಕಟ್ಟಿ, ಮನೋಜ ಹುಲಿಕಟ್ಟಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರು.

ಚಿರತೆ ಹಿಡಿಯುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಕಾರ್ಯಾಚರಣೆ ಮಾಡಿ ಬೇರೆ ಕಡೆ ಸ್ಥಳಾಂತರಿಸಲಾಗುವುದು ಹಾಗೂ ರೈತರಿಗೆ ಸರ್ಕಾರದಿಂದ ಪರಿಹಾರ ಧನ ನೀಡಲಾಗುವುದು ಎಂದು ತಾಲ್ಲೂಕು ವಲಯ ಅರಣ್ಯ ಅಧಿಕಾರಿ ಶ್ರೀಕಾಂತ ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT