<p><strong>ಕಲಘಟಗಿ</strong>: ತಾಲ್ಲೂಕಿನ ಹುಲ್ಲಂಬಿ ಹಾಗೂ ಸುಳಿಕಟ್ಟಿ ಗ್ರಾಮದ ರೈತರ ಜಮೀನುಗಳ ವಿಸ್ತೀರ್ಣ ನಿಗದಿಪಡಿಸಿ ಪೋಡಿ ಮಾಡಿಕೊಡುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಡಿ.6ರಿಂದ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಪರಶುರಾಮ ಎತ್ತಿನಗುಡ್ಡ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಅಳವಡಿಸಿರುವ ಧರಣಿ ಸತ್ಯಾಗ್ರಹ ವೇದಿಕೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.</p>.<p>ರೈತ ಮುಖಂಡರಾದ ಸುಭಾಸ ಸುಣಗಾರ ಮಾತನಾಡಿ, ಹುಲ್ಲಂಬಿ ಗ್ರಾಮದ ಸರ್ವೇ ನಂ: 123ರ 59 ಎಕ್ಕರೆ 27 ಗುಂಟೆ ಹಾಗೂ 145ರ ಕ್ಷೇತ್ರ 121 ಎಕ್ಕರೆ 32 ಗುಂಟೆ ಜಮೀನಿನ ಆಕಾರ ನಿಗದಿ ಪಡಿಸಿ ಪೋಡಿ ಮಾಡಿಕೊಡಲು ಅರ್ಜಿ ಸಲ್ಲಿಸಿ 3 ವರ್ಷ ಕಳೆದರೂ ಕೆಲಸ ಮಾಡುತ್ತಿಲ್ಲ ಎಂದರು.</p>.<p>ರೈತ ಮುಖಂಡರಾದ ಉಳವಪ್ಪ ಬಳಿಗೇರ ಮಾತನಾಡಿ, ತಾಲ್ಲೂಕಿನ ಜಮೀನಿನ ಉತ್ತಾರ ಸರಿಯಾಗಿರದ ಕಾರಣ ರೈತರಿಗೆ ಸಾಲ ಸೌಲಭ್ಯ ಸಿಗುತ್ತಿಲ್ಲ. ಹಲವು ಬಾರಿ ಅರ್ಜಿ ಸಲ್ಲಿಸಿ ಕಚೇರಿಗೆ ಅಲೆದಾಡಿದರೂ ಅಧಿಕಾರಿಗಳು ಸರಿಪಡಿಸುತ್ತಿಲ್ಲ ಎಂದು ಹೇಳಿದರು.</p>.<p>ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಅಧ್ಯಕ್ಷ ಮಹೇಶ ಬೆಳಗಾಂವಕರ ಮಾತನಾಡಿ, ರೈತರ ಹಲವು ಸಮಸ್ಯೆಗಳ ಕುರಿತು ಮುಷ್ಕರ ನಡೆಸುತ್ತಿದ್ದೇವೆ. ನಮ್ಮ ಹೋರಾಟಕ್ಕೆ ಕನ್ನಡಪರ ಸಂಘಟನೆ, ವಕೀಲರ ಹಾಗೂ ಹಲವು ಸಂಘಟನೆಯವರು ಕೈಜೋಡಿಸಿವೆ ಎಂದರು.</p>.<p>ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಗುರುನಾಥಗೌಡ್ರ, ತಾಲ್ಲೂಕ ಸಂಗ್ರಾಮ ಸೇನೆ ಅಧ್ಯಕ್ಷ ಸಾತಪ್ಪ ಕುಂಕೂರ, ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರಗೌಡ ಭಾವಿಕಟ್ಟಿ, ಸಿದ್ದಪ್ಪ ಬೆಟಗೇರಿ, ಬಸನಗೌಡ ಸಿದ್ದನಗೌಡ್ರ, ಮಾಳಪ್ಪ ಹೊನ್ನಳ್ಳಿ,ಪಕ್ಕೀರೇಶ ನೇಸ್ರೆಕರ, ಶಂಕರಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ</strong>: ತಾಲ್ಲೂಕಿನ ಹುಲ್ಲಂಬಿ ಹಾಗೂ ಸುಳಿಕಟ್ಟಿ ಗ್ರಾಮದ ರೈತರ ಜಮೀನುಗಳ ವಿಸ್ತೀರ್ಣ ನಿಗದಿಪಡಿಸಿ ಪೋಡಿ ಮಾಡಿಕೊಡುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಡಿ.6ರಿಂದ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಪರಶುರಾಮ ಎತ್ತಿನಗುಡ್ಡ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಅಳವಡಿಸಿರುವ ಧರಣಿ ಸತ್ಯಾಗ್ರಹ ವೇದಿಕೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.</p>.<p>ರೈತ ಮುಖಂಡರಾದ ಸುಭಾಸ ಸುಣಗಾರ ಮಾತನಾಡಿ, ಹುಲ್ಲಂಬಿ ಗ್ರಾಮದ ಸರ್ವೇ ನಂ: 123ರ 59 ಎಕ್ಕರೆ 27 ಗುಂಟೆ ಹಾಗೂ 145ರ ಕ್ಷೇತ್ರ 121 ಎಕ್ಕರೆ 32 ಗುಂಟೆ ಜಮೀನಿನ ಆಕಾರ ನಿಗದಿ ಪಡಿಸಿ ಪೋಡಿ ಮಾಡಿಕೊಡಲು ಅರ್ಜಿ ಸಲ್ಲಿಸಿ 3 ವರ್ಷ ಕಳೆದರೂ ಕೆಲಸ ಮಾಡುತ್ತಿಲ್ಲ ಎಂದರು.</p>.<p>ರೈತ ಮುಖಂಡರಾದ ಉಳವಪ್ಪ ಬಳಿಗೇರ ಮಾತನಾಡಿ, ತಾಲ್ಲೂಕಿನ ಜಮೀನಿನ ಉತ್ತಾರ ಸರಿಯಾಗಿರದ ಕಾರಣ ರೈತರಿಗೆ ಸಾಲ ಸೌಲಭ್ಯ ಸಿಗುತ್ತಿಲ್ಲ. ಹಲವು ಬಾರಿ ಅರ್ಜಿ ಸಲ್ಲಿಸಿ ಕಚೇರಿಗೆ ಅಲೆದಾಡಿದರೂ ಅಧಿಕಾರಿಗಳು ಸರಿಪಡಿಸುತ್ತಿಲ್ಲ ಎಂದು ಹೇಳಿದರು.</p>.<p>ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಅಧ್ಯಕ್ಷ ಮಹೇಶ ಬೆಳಗಾಂವಕರ ಮಾತನಾಡಿ, ರೈತರ ಹಲವು ಸಮಸ್ಯೆಗಳ ಕುರಿತು ಮುಷ್ಕರ ನಡೆಸುತ್ತಿದ್ದೇವೆ. ನಮ್ಮ ಹೋರಾಟಕ್ಕೆ ಕನ್ನಡಪರ ಸಂಘಟನೆ, ವಕೀಲರ ಹಾಗೂ ಹಲವು ಸಂಘಟನೆಯವರು ಕೈಜೋಡಿಸಿವೆ ಎಂದರು.</p>.<p>ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಗುರುನಾಥಗೌಡ್ರ, ತಾಲ್ಲೂಕ ಸಂಗ್ರಾಮ ಸೇನೆ ಅಧ್ಯಕ್ಷ ಸಾತಪ್ಪ ಕುಂಕೂರ, ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರಗೌಡ ಭಾವಿಕಟ್ಟಿ, ಸಿದ್ದಪ್ಪ ಬೆಟಗೇರಿ, ಬಸನಗೌಡ ಸಿದ್ದನಗೌಡ್ರ, ಮಾಳಪ್ಪ ಹೊನ್ನಳ್ಳಿ,ಪಕ್ಕೀರೇಶ ನೇಸ್ರೆಕರ, ಶಂಕರಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>