<p><strong>ಕಲಘಟಗಿ:</strong> ಇಲ್ಲಿನ ರಾಷ್ಟ್ರಿಯ, ರಾಜ್ಯ ಹೆದ್ದಾರಿಗಳು ಹಾಗೂ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕಿಸುವ ಹಲವು ರಸ್ತೆಗಳು ಹಾಳಾಗಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.</p> <p>ಕಲಘಟಗಿಯಿಂದ ಹಿಂಡಸಗೇರಿ, ಮಲಕನಕೊಪ್ಪ, ತಬಕದಹೊನ್ನಳ್ಳಿ ಮಾರ್ಗವಾಗಿ ತಡಸ ಸಂಪರ್ಕಿಸುವ ರಾಜ್ಯ ಹೆದ್ದಾರಿಯು ₹50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಹಿಂಡಸಗೇರಿ ಗ್ರಾಮದ ಬೇಡ್ತಿ ಹಳ್ಳದಿಂದ ತಬಕದಹೊನ್ನಳ್ಳಿ ಗ್ರಾಮದವರೆಗೆ ರಸ್ತೆಯನ್ನು ಅಲ್ಲಲ್ಲಿ ಅಗೆದು, ಹಾಗೇ ಬಿಟ್ಟಿದ್ದರಿಂದ ವಾಹನ ಸಂಚಾರ ದುಸ್ತರವಾಗಿದೆ.</p> <p>ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಗುಂಡಿ ಮುಚ್ಚಲು ನಿರ್ಲಕ್ಷ್ಯ ವಹಿಸುತ್ತಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.</p> <p>ಹುಬ್ಬಳ್ಳಿ– ಕಾರವಾರ ರಾಷ್ಟ್ರಿಯ ಹೆದ್ದಾರಿ, ಕಲಘಟಗಿ– ಧಾರವಾಡ ರಾಜ್ಯ ಹೆದ್ದಾರಿ, ಶಿವನಾಪುರ– ದ್ಯಾವನಕೊಂಡ ಗ್ರಾಮದ ಒಳ ರಸ್ತೆ, ಜಿನ್ನೂರ– ಮಲಕನಕೊಪ್ಪ, ಕಲಘಟಗಿ– ಬೇಗೂರ, ಕಲಘಟಗಿ– ಮಡಕಿಹೊನ್ನಳ್ಳಿ ರಸ್ತೆಗಳೂ ತಗ್ಗು– ಗುಂಡಿಗಳಿಂದ ಕೂಡಿವೆ. ಈ ರಸ್ತೆಗಳ ಮೂಲಕ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಆಂಬುಲೆನ್ಸ್ ಕೂಡ ಸಂಚರಿಸಲು ಸಾಧ್ಯವಾಗುತ್ತಿಲ್ಲ.</p> <p>ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡರೆ ಗುಂಡಿಗಳ ಅಂದಾಜು ಸಿಗದೆ ವಾಹನಗಳು ಅಪಘಾತಕ್ಕೀಡಾಗುವ ಸಂಭವವಿದೆ. ಹಾಗಾಗಿ, ವಾಹನ ಸವಾರರು ಭಯದಲ್ಲೇ ಸಂಚರಿಸುವಂತಾಗಿದೆ.</p>.<div><blockquote>ಕಲಘಟಗಿ– ತಡಸ ರಾಜ್ಯ ಹೆದ್ದಾರಿ ಕೆಸರು ಗದ್ದೆಯಂತಾಗಿದೆ. ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ </blockquote><span class="attribution">ಸಾತಪ್ಪ ಕುಂಕೂರ, ಸಂಗ್ರಾಮ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ</span></div>.<div><blockquote>ಧಾರವಾಡ ಹಾಗೂ ತಡಸ ರಾಜ್ಯ ಹೆದ್ದಾರಿ ಕಾಮಗಾರಿ ಚಾಲ್ತಿಯಲ್ಲಿದೆ. ರಸ್ತೆ ದುರಸ್ತಿ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗುವುದು</blockquote><span class="attribution"> ಸಿದ್ದಲಿಂಗಸ್ವಾಮಿ, ಎಇಇ, ಲೋಕೋಪಯೋಗಿ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ:</strong> ಇಲ್ಲಿನ ರಾಷ್ಟ್ರಿಯ, ರಾಜ್ಯ ಹೆದ್ದಾರಿಗಳು ಹಾಗೂ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕಿಸುವ ಹಲವು ರಸ್ತೆಗಳು ಹಾಳಾಗಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.</p> <p>ಕಲಘಟಗಿಯಿಂದ ಹಿಂಡಸಗೇರಿ, ಮಲಕನಕೊಪ್ಪ, ತಬಕದಹೊನ್ನಳ್ಳಿ ಮಾರ್ಗವಾಗಿ ತಡಸ ಸಂಪರ್ಕಿಸುವ ರಾಜ್ಯ ಹೆದ್ದಾರಿಯು ₹50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಹಿಂಡಸಗೇರಿ ಗ್ರಾಮದ ಬೇಡ್ತಿ ಹಳ್ಳದಿಂದ ತಬಕದಹೊನ್ನಳ್ಳಿ ಗ್ರಾಮದವರೆಗೆ ರಸ್ತೆಯನ್ನು ಅಲ್ಲಲ್ಲಿ ಅಗೆದು, ಹಾಗೇ ಬಿಟ್ಟಿದ್ದರಿಂದ ವಾಹನ ಸಂಚಾರ ದುಸ್ತರವಾಗಿದೆ.</p> <p>ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಗುಂಡಿ ಮುಚ್ಚಲು ನಿರ್ಲಕ್ಷ್ಯ ವಹಿಸುತ್ತಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.</p> <p>ಹುಬ್ಬಳ್ಳಿ– ಕಾರವಾರ ರಾಷ್ಟ್ರಿಯ ಹೆದ್ದಾರಿ, ಕಲಘಟಗಿ– ಧಾರವಾಡ ರಾಜ್ಯ ಹೆದ್ದಾರಿ, ಶಿವನಾಪುರ– ದ್ಯಾವನಕೊಂಡ ಗ್ರಾಮದ ಒಳ ರಸ್ತೆ, ಜಿನ್ನೂರ– ಮಲಕನಕೊಪ್ಪ, ಕಲಘಟಗಿ– ಬೇಗೂರ, ಕಲಘಟಗಿ– ಮಡಕಿಹೊನ್ನಳ್ಳಿ ರಸ್ತೆಗಳೂ ತಗ್ಗು– ಗುಂಡಿಗಳಿಂದ ಕೂಡಿವೆ. ಈ ರಸ್ತೆಗಳ ಮೂಲಕ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಆಂಬುಲೆನ್ಸ್ ಕೂಡ ಸಂಚರಿಸಲು ಸಾಧ್ಯವಾಗುತ್ತಿಲ್ಲ.</p> <p>ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡರೆ ಗುಂಡಿಗಳ ಅಂದಾಜು ಸಿಗದೆ ವಾಹನಗಳು ಅಪಘಾತಕ್ಕೀಡಾಗುವ ಸಂಭವವಿದೆ. ಹಾಗಾಗಿ, ವಾಹನ ಸವಾರರು ಭಯದಲ್ಲೇ ಸಂಚರಿಸುವಂತಾಗಿದೆ.</p>.<div><blockquote>ಕಲಘಟಗಿ– ತಡಸ ರಾಜ್ಯ ಹೆದ್ದಾರಿ ಕೆಸರು ಗದ್ದೆಯಂತಾಗಿದೆ. ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ </blockquote><span class="attribution">ಸಾತಪ್ಪ ಕುಂಕೂರ, ಸಂಗ್ರಾಮ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ</span></div>.<div><blockquote>ಧಾರವಾಡ ಹಾಗೂ ತಡಸ ರಾಜ್ಯ ಹೆದ್ದಾರಿ ಕಾಮಗಾರಿ ಚಾಲ್ತಿಯಲ್ಲಿದೆ. ರಸ್ತೆ ದುರಸ್ತಿ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗುವುದು</blockquote><span class="attribution"> ಸಿದ್ದಲಿಂಗಸ್ವಾಮಿ, ಎಇಇ, ಲೋಕೋಪಯೋಗಿ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>