<p>ಕಲಘಟಗಿ: ‘ನೀರಿನ ಕೊರತೆ ಇರುವ ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಯಿಸಿ, ಅಗತ್ಯಬಿದ್ದರೆ ಟ್ಯಾಂಕರ್ ನೀರು ಪೂರೈಸಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಅವರು ಪಿಡಿಒ ಹಾಗೂ ಆಡಳಿತಾಧಿಕಾರಿಗಳಿಗೆ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ನೀರಿನ ಶುದ್ಧತೆಯ ಬಗ್ಗೆ ಗಮನಹರಿಸಬೇಕು. ಬೇಸಿಗೆ ಕಾಲ ಇರುವುದರಿಂದ ಮಿತವಾಗಿ ನೀರು ಬಳಸಲು ತಿಳಿವಳಿಕೆ ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಎಲ್ಲರೂ ತುರ್ತಾಗಿ ಫೇಸ್ ಅಥೆಂಟಿಕೇಶನ್ ಪೂರ್ಣಗೊಳಿಸಿ, ಕೂಲಿ ಕಾರ್ಮಿಕರ ಜಾಬ್ ಕಾರ್ಡ್ಇ–ಕೆವೈಸಿ ಚುರುಕುಗೊಳಿಸಬೇಕು.ಒಂಬುಡ್ಸ್ಮನ್ ರಿಕವರಿಸಮರ್ಪಕವಾಗಿ ಆಗಬೇಕು. ಪ್ರತಿ ತಿಂಗಳು ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಸಭೆ ನಡೆಸಬೇಕು’ ಎಂದು ಸೂಚಿಸಿದರು.</p>.<p>‘ತಾಲ್ಲೂಕಿನ ಬೀರವಳ್ಳಿ,ತಾವರಗೇರಿ, ಸೂರಶೆಟ್ಟಿಕೊಪ್ಪ ಇನ್ನಿತರ ಗ್ರಾಮದಲ್ಲಿ ಕುಡಿಯುವ ನೀರಿದ್ದರೂ, ವಿದ್ಯುತ್ ವ್ಯತ್ಯಯದಿಂದಾಗಿ ಪೂರೈಕೆಗೆ ಸಮಸ್ಯೆ ಆಗುತ್ತಿದೆ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯ ಗಮನ ಸೆಳೆದರು.</p>.<p>ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ 2025-26ರ ತೆರಿಗೆ ವಸೂಲಾತಿ ಹಾಗೂ ಶೇ 100ರಷ್ಟು ಮಾನವ ದಿನಗಳ ಗುರಿ ಸಾಧಿಸಿ ಉತ್ತಮ ಕೆಲಸ ನಿರ್ವಹಿಸಿದ ಪಿಡಿಒ, ಸಿಬ್ಬಂದಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಇಒಪರಶುರಾಮ ಸಾವಂತ, ಅಧಿಕಾರಿಗಳಾದ ಗಿರೀಶ ಕೋರಿ, ಸಂತೋಷ ಸತಾಳಿ, ಸುರೇಶ ಗುರನ್ನವರ, ಶಿವಪ್ಪ ಸಣ್ಣಮನಿ, ಕೃಷಿ ಅಧಿಕಾರಿ ಅಮರ ನಾಯ್ಕರ, ತೋಟಗಾರಿಕಾ ಅಧಿಕಾರಿ ಶ್ರೀದೇವಿ ಎ.ಎಸ್., ಸಮಾಜ ಕಲ್ಯಾಣ ಅಧಿಕಾರಿ ಅನುಷಾ ಹಿರೇಮಠ, ಗಾಯತ್ರಿ ಸಜ್ಜನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-24-173608680</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಘಟಗಿ: ‘ನೀರಿನ ಕೊರತೆ ಇರುವ ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಯಿಸಿ, ಅಗತ್ಯಬಿದ್ದರೆ ಟ್ಯಾಂಕರ್ ನೀರು ಪೂರೈಸಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಅವರು ಪಿಡಿಒ ಹಾಗೂ ಆಡಳಿತಾಧಿಕಾರಿಗಳಿಗೆ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ನೀರಿನ ಶುದ್ಧತೆಯ ಬಗ್ಗೆ ಗಮನಹರಿಸಬೇಕು. ಬೇಸಿಗೆ ಕಾಲ ಇರುವುದರಿಂದ ಮಿತವಾಗಿ ನೀರು ಬಳಸಲು ತಿಳಿವಳಿಕೆ ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಎಲ್ಲರೂ ತುರ್ತಾಗಿ ಫೇಸ್ ಅಥೆಂಟಿಕೇಶನ್ ಪೂರ್ಣಗೊಳಿಸಿ, ಕೂಲಿ ಕಾರ್ಮಿಕರ ಜಾಬ್ ಕಾರ್ಡ್ಇ–ಕೆವೈಸಿ ಚುರುಕುಗೊಳಿಸಬೇಕು.ಒಂಬುಡ್ಸ್ಮನ್ ರಿಕವರಿಸಮರ್ಪಕವಾಗಿ ಆಗಬೇಕು. ಪ್ರತಿ ತಿಂಗಳು ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಸಭೆ ನಡೆಸಬೇಕು’ ಎಂದು ಸೂಚಿಸಿದರು.</p>.<p>‘ತಾಲ್ಲೂಕಿನ ಬೀರವಳ್ಳಿ,ತಾವರಗೇರಿ, ಸೂರಶೆಟ್ಟಿಕೊಪ್ಪ ಇನ್ನಿತರ ಗ್ರಾಮದಲ್ಲಿ ಕುಡಿಯುವ ನೀರಿದ್ದರೂ, ವಿದ್ಯುತ್ ವ್ಯತ್ಯಯದಿಂದಾಗಿ ಪೂರೈಕೆಗೆ ಸಮಸ್ಯೆ ಆಗುತ್ತಿದೆ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯ ಗಮನ ಸೆಳೆದರು.</p>.<p>ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ 2025-26ರ ತೆರಿಗೆ ವಸೂಲಾತಿ ಹಾಗೂ ಶೇ 100ರಷ್ಟು ಮಾನವ ದಿನಗಳ ಗುರಿ ಸಾಧಿಸಿ ಉತ್ತಮ ಕೆಲಸ ನಿರ್ವಹಿಸಿದ ಪಿಡಿಒ, ಸಿಬ್ಬಂದಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಇಒಪರಶುರಾಮ ಸಾವಂತ, ಅಧಿಕಾರಿಗಳಾದ ಗಿರೀಶ ಕೋರಿ, ಸಂತೋಷ ಸತಾಳಿ, ಸುರೇಶ ಗುರನ್ನವರ, ಶಿವಪ್ಪ ಸಣ್ಣಮನಿ, ಕೃಷಿ ಅಧಿಕಾರಿ ಅಮರ ನಾಯ್ಕರ, ತೋಟಗಾರಿಕಾ ಅಧಿಕಾರಿ ಶ್ರೀದೇವಿ ಎ.ಎಸ್., ಸಮಾಜ ಕಲ್ಯಾಣ ಅಧಿಕಾರಿ ಅನುಷಾ ಹಿರೇಮಠ, ಗಾಯತ್ರಿ ಸಜ್ಜನ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-24-173608680</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>