‘ಕಾಮಗಾರಿಗೆ ಈಗಾಗಲೇ ಪರಿಸರ ಸಚಿವಾಲಯದಿಂದ ಅನುಮತಿ ಪಡೆಯಲಾಗಿದೆ. ವನ್ಯಜೀವಿ ಮಂಡಳಿಗೆ ಕರ್ನಾಟಕದಿಂದ ಮಾಹಿತಿ ಒದಗಿಸಿ, ಕಾಮಗಾರಿಗೆ ಅನುಮೋದನೆ ಪಡೆಯಲಾಗುವುದು. ಕೊಟ್ಟಿರುವ ಮಾತು ತಪ್ಪುವುದಿಲ್ಲ. ಕಳಸಾ ಬಂಡೂರಿ ಯೋಜನೆ ಕಾಮಗಾರಿ ಬಿಜೆಪಿ ಸರ್ಕಾರದಿಂದಲೇ ಮಾಡುತ್ತೇವೆ. ಇದರ ಸಂಪೂರ್ಣ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿದ್ದರೆ ಎಲ್ಲವೂ ಸಾಧ್ಯವಾಗಲಿದೆ’ ಎಂದು ತಿಳಿಸಿದರು.