ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ಉತ್ಸವ ನಡೆಯಲಿದೆ. ಕನಕದಾಸರ ಬದುಕು-ಬರಹ, ವಿಚಾರ ಸಂಕಿರಣ, ಕನಕ ಪ್ರಶಸ್ತಿ, ಕವಿಗೋಷ್ಠಿ, ಕನಕ ಸಂಗೀತ, ನೃತ್ಯ, ನಾಟಕ, ರೂಪಕ, ಹಾಸ್ಯ, ಜನಪದ ಕಲಾತಂಡಗಳ ಪ್ರದರ್ಶನ, ಸಾಂಸ್ಕೃತಿಕ ಉತ್ಸವ, ಕೈಮಗ್ಗ ಜವಳಿ ವಸ್ತುಗಳ ಮಾರಾಟ ಮೇಳ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಉತ್ಸವ ನಿಮಿತ್ತ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.