ಈದ್ಗಾ ಮೈದಾನದಲ್ಲಿ ಕನಕ ದಾಸ ಜಯಂತಿ ಆಚರಿಸಲು ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಅಣ್ಣಪ್ಪ ದೀವಟಗಿ ಮನವಿ ಸಲ್ಲಿಸಿದ್ದರು. ಈ ಕುರಿತು ಬುಧವಾರ ರಾತ್ರಿ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ಮೇಯರ್, ಉಪಮೇಯರ್, ಸಭಾನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಇತರ ಮುಖಂಡರು ಸಭೆ ನಡೆಸಿ ಅನುಮತಿ ನೀಡಲು ನಿರ್ಧರಿಸಲಾಯಿತು.