<p><strong>ಕಂಪ್ಲಿ:</strong> ತಾಲ್ಲೂಕಿನ ಕಣವಿ ತಿಮ್ಮಲಾಪುರ ಗ್ರಾಮದಲ್ಲಿ ಮಂಗಳವಾರ ಶ್ರೀಕೃಷ್ಣದೇವರಾಯನ ಕಾಲದ ಕನ್ನಡ ಮತ್ತು ತೆಲುಗು ಮಿಶ್ರಿತ ಶಾಸನ ಪತ್ತೆಯಾಗಿದೆ.</p>.<p>‘ಪತ್ತೆಯಾಗಿರುವ ಶಾಸನ ವಿಜಯನಗರ ಕಾಲದ ಶ್ರೀಕೃಷ್ಣದೇವರಾಯನ ಕಾಲದ ಶಾಸನವಾಗಿದೆ. ಇದರ ಕಾಲ ಸಾಮಾನ್ಯ ಶಕ 1516 ಎಂದು ಗುರುತಿಸಲಾಗಿದೆ’ ಎಂದು ಸಂಡೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹಾಯಕ ಪ್ರಾಧ್ಯಾಪಕ ತಳವಾರ ನರಸಿಂಹ ತಿಳಿಸಿದರು.</p>.<p>‘ಈ ಶಾಸನವನ್ನು ಕನ್ನಡ ಲಿಪಿಯಲ್ಲಿ ಬರೆಯಲಾಗಿದೆ. ಆದರೆ, ಶಾಸನದ ಭಾಷೆ ತೆಲುಗು. ಮೇಲ್ಭಾಗದಲ್ಲಿ 18 ಸಾಲುಗಳು ಹಾಗೂ ಎಡಭಾಗದ ಅಂಚಿನಲ್ಲಿ ಎರಡು ಸಾಲುಗಳಿಂದ ಕೂಡಿದೆ ಹಾಗೂ ಮೇಲ್ನೋಟಕ್ಕೆ ಇದು ದಾನ ಶಾಸನ ಎಂಬಂತೆ ಗೋಚರಿಸುತ್ತಿದೆ’ ಎಂದರು.</p>.<p>ಕನ್ನಡ ವಿಶ್ವವಿದ್ಯಾಲಯ ಕುಲಪತಿ ಪರಮಶಿವಮೂರ್ತಿ ಅವರು, ಈ ಶಾಸನ ತೆಲುಗು ಭಾಷೆಯಲ್ಲಿದ್ದು, ಹೆಚ್ಚಿನ ಅಧ್ಯಯನಕ್ಕೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಮೈಸೂರಿನ ಕೇಂದ್ರ ಪುರಾತತ್ವ ಇಲಾಖೆಯ ಶಾಸನ ತಜ್ಞ ಡಾ.ನಾಗರಾಜಪ್ಪ ಅವರು ಶಾಸನ ಪಡಿಯಚ್ಚು ತೆಗೆದುಕೊಂಡಿದ್ದು, ಹೆಚ್ಚಿನ ಅಧ್ಯಯನ ಕೈಗೊಂಡಿದ್ದಾರೆ ಎಂದು ತಿಳಿಸಿದರು.</p>.<p>ಪ್ರಸ್ತುತ ಶಾಸನ ಪತ್ತೆ ಹಚ್ಚುವಲ್ಲಿ ಯಲ್ಲಪ್ಪ, ನಾಗರಾಜ, ಮಾರೆಪ್ಪ ಮತ್ತು ಗ್ರಾಮಸ್ಥರು ಸಹಕರಿಸಿದರು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ತಾಲ್ಲೂಕಿನ ಕಣವಿ ತಿಮ್ಮಲಾಪುರ ಗ್ರಾಮದಲ್ಲಿ ಮಂಗಳವಾರ ಶ್ರೀಕೃಷ್ಣದೇವರಾಯನ ಕಾಲದ ಕನ್ನಡ ಮತ್ತು ತೆಲುಗು ಮಿಶ್ರಿತ ಶಾಸನ ಪತ್ತೆಯಾಗಿದೆ.</p>.<p>‘ಪತ್ತೆಯಾಗಿರುವ ಶಾಸನ ವಿಜಯನಗರ ಕಾಲದ ಶ್ರೀಕೃಷ್ಣದೇವರಾಯನ ಕಾಲದ ಶಾಸನವಾಗಿದೆ. ಇದರ ಕಾಲ ಸಾಮಾನ್ಯ ಶಕ 1516 ಎಂದು ಗುರುತಿಸಲಾಗಿದೆ’ ಎಂದು ಸಂಡೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹಾಯಕ ಪ್ರಾಧ್ಯಾಪಕ ತಳವಾರ ನರಸಿಂಹ ತಿಳಿಸಿದರು.</p>.<p>‘ಈ ಶಾಸನವನ್ನು ಕನ್ನಡ ಲಿಪಿಯಲ್ಲಿ ಬರೆಯಲಾಗಿದೆ. ಆದರೆ, ಶಾಸನದ ಭಾಷೆ ತೆಲುಗು. ಮೇಲ್ಭಾಗದಲ್ಲಿ 18 ಸಾಲುಗಳು ಹಾಗೂ ಎಡಭಾಗದ ಅಂಚಿನಲ್ಲಿ ಎರಡು ಸಾಲುಗಳಿಂದ ಕೂಡಿದೆ ಹಾಗೂ ಮೇಲ್ನೋಟಕ್ಕೆ ಇದು ದಾನ ಶಾಸನ ಎಂಬಂತೆ ಗೋಚರಿಸುತ್ತಿದೆ’ ಎಂದರು.</p>.<p>ಕನ್ನಡ ವಿಶ್ವವಿದ್ಯಾಲಯ ಕುಲಪತಿ ಪರಮಶಿವಮೂರ್ತಿ ಅವರು, ಈ ಶಾಸನ ತೆಲುಗು ಭಾಷೆಯಲ್ಲಿದ್ದು, ಹೆಚ್ಚಿನ ಅಧ್ಯಯನಕ್ಕೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಮೈಸೂರಿನ ಕೇಂದ್ರ ಪುರಾತತ್ವ ಇಲಾಖೆಯ ಶಾಸನ ತಜ್ಞ ಡಾ.ನಾಗರಾಜಪ್ಪ ಅವರು ಶಾಸನ ಪಡಿಯಚ್ಚು ತೆಗೆದುಕೊಂಡಿದ್ದು, ಹೆಚ್ಚಿನ ಅಧ್ಯಯನ ಕೈಗೊಂಡಿದ್ದಾರೆ ಎಂದು ತಿಳಿಸಿದರು.</p>.<p>ಪ್ರಸ್ತುತ ಶಾಸನ ಪತ್ತೆ ಹಚ್ಚುವಲ್ಲಿ ಯಲ್ಲಪ್ಪ, ನಾಗರಾಜ, ಮಾರೆಪ್ಪ ಮತ್ತು ಗ್ರಾಮಸ್ಥರು ಸಹಕರಿಸಿದರು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>