ಇದುವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲ ಪಕ್ಷಗಳ ಸರ್ಕಾರಗಳು ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿವೆ. 1963ರಲ್ಲಿ ಕನ್ನಡವೇ ರಾಜ್ಯ ಭಾಷೆ ಎಂದು ಅಂದಿನ ಸರ್ಕಾರ ಅಧಿಕೃತವಾಗಿ ಘೋಷಿಸಿತ್ತು. 1983ರಲ್ಲಿ ಕನ್ನಡ ಕಾವಲು ಸಮಿತಿ ರಚಿಸಲಾಗಿತ್ತು. ಕನ್ನಡ ಭಾಷೆ ಗಟ್ಟಿಗೊಳಿಸಲು ಇದುವರೆಗೆ ಸರ್ಕಾರಗಳು 375 ಕನ್ನಡ ಪರ ಆದೇಶಗಳನ್ನು ಹೊರಡಿಸಿವೆ. ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡಲು ಸಲ್ಲಿಕೆಯಾದ ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ. ಇದರ ಆಧಾರದ ಮೇಲೆ ಕಾನೂನು ರಚಿಸುವುದಷ್ಟೇ ಬಾಕಿ ಇದೆ ಎಂದರು.