ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂರಾರು ವಿದ್ಯಾರ್ಥಿಗಳಿಂದ ಕಾರ್ಗಿಲ್ ವಿಜಯೋತ್ಸವ

ಗಜಾನನ ಮಹಾ ಮಂಡಳ, ಎಬಿವಿಪಿ ನೇತೃತ್ವ
Last Updated 9 ಜುಲೈ 2019, 2:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದ ಎದುರು ವಿವಿಧ ಸಂಘಟನೆಗಳು ಗುರುವಾರ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದರು.

ಗಜಾನನ ಮಹಾ ಮಂಡಳದ ನೇತೃತ್ವದಲ್ಲಿ ನಡೆದ ವಿಜಯೋತ್ಸವ ಮೆರವಣಿಗೆಯಲ್ಲಿ ಎಸ್‌ಜೆಎಂವಿಎಸ್ ಕಾಲೇಜು ಲ್ಯಾಮಿಂಗ್ಟನ್ ಶಾಲೆಯ ಮಕ್ಕಳ ಪಾಲ್ಗೊಂಡಿದ್ದರು. ಹುತಾತ್ಮ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಅವರ ಪತ್ನಿ ಮಹಾದೇವಿ ಕೊಪ್ಪದ್ ಮಾತನಾಡಿ, ಮಳೆ– ಗಾಳಿ ಎಂದು ಯೋಚಿಸದೆ ಪ್ರಾಣ ಪಣಕ್ಕಿಟ್ಟು ದೇಶದ ಗಡಿ ಕಾಯುವ ಸೈನಿಕರ ಸ್ಫೂರ್ತಿಯನ್ನು ಹೆಚ್ಚಿಸುವಂತಹ ಕೆಲಸವನ್ನು ಮಾಡಬೇಕು. ಯುವಕರು ಸಹ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು. ಸೇನೆ ಸೇರಲು ಮನಸ್ಸು ಮಾಡಬೇಕು ಎಂದು ಹೇಳಿದರು.

ಎಬಿವಿಪಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿಯೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT