ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಶೇಖರ ವಸ್ತ್ರದಗೆ ‘ಕರ್ಕಿ ಕಾವ್ಯ’ ಪ್ರಶಸ್ತಿ

Last Updated 11 ಡಿಸೆಂಬರ್ 2019, 11:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಾಹಿತಿ ಚಂದ್ರಶೇಖರ ವಸ್ತ್ರದ ಅವರ ‘ಅರಿವು ಅಕ್ಷರದಾಚೆ’ ವಚನ ಚೌಪದಿ ಕೃತಿಗೆ 2019ನೇ ಸಾಲಿನ ಡಾ.ಡಿ.ಎಸ್.ಕರ್ಕಿ ಕಾವ್ಯ ಪ್ರಶಸ್ತಿ ಲಭಿಸಿದೆ.

₹ 10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡ ಈ ಪ್ರಶಸ್ತಿಯನ್ನು ಡಿ.14ರಂದು ಸಂಜೆ 6ಕ್ಕೆ ಹುಬ್ಬಳ್ಳಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಡಾ.ಡಿ.ಎಸ್‌.ಕರ್ಕಿ ಸಾಹಿತ್ಯ ವೇದಿಕೆ ಅಧ್ಯಕ್ಷ ಎಂ.ಎ.ಸುಬ್ರಹ್ಮಣ್ಯ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಾಹಿತಿಗಳಾದ ಗುರುಲಿಂಗ ಕಾಪಸೆ, ದೊಡ್ಡರಂಗೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಚಿಂತಕ ಪ್ರೊ.ಬಸವರಾಜ ಜಗಜಂಪಿ ವಸ್ತ್ರದ ಅವರ ಕೃತಿಯ ಕುರಿತು ಮಾತನಾಡಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT