ಸದ್ಯ ಬಿಜೆಪಿಯಲ್ಲಿರುವ ಮೋಹನ ಲಿಂಬಿಕಾಯಿ ಹಾಗೂ ಎಸ್.ಐ.ಚಿಕ್ಕನಗೌಡರ ಅವರು ಕಾಂಗ್ರೆಸ್ ಸೇರಲಿದ್ದಾರೆ ಹಾಗೂ ಇವರಿಗೆ ಕ್ರಮವಾಗಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಹಾಗೂ ಕುಂದಗೋಳ ಕ್ಷೇತ್ರದ ಟಿಕೆಟ್ ಖಚಿತಗೊಂಡಿದೆ ಎಂಬ ಮಾತುಗಳು ಇದೀಗ ಕೇಳಿಬರುತ್ತಿವೆ. ಈ ಎರಡೂ ಕ್ಷೇತ್ರಗಳಿಗೆ 11ಕ್ಕೂ ಹೆಚ್ಚು ಆಕಾಂಕ್ಷಿಗಳು ಈಗಾಗಲೇ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಸಿದ್ದಾರೆ. ಕ್ಷೇತ್ರದ ಉದ್ದಗಲಕ್ಕೂ ಓಡಾಡಿ ಮತದಾರರ ಮನವೊಲಿಸುವ ಕಸರತ್ತು ನಡೆಸಿದ್ದಾರೆ. ಇದರ ಬೆನ್ನಲ್ಲೇ ಹೊರಬಿದ್ದಿರುವ ಈ ಸುದ್ದಿ ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.