<p><strong>ಧಾರವಾಡ</strong>: ಕರ್ನಾಟಕ ವಿಶ್ವವಿದ್ಯಾಲಯ ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆಗೆ (ತಾತ್ಕಾಲಿಕ ನೇಮಕಾತಿ) ಸಾಯಿ ಪಿಯು ಕಾಲೇಜಿನ ಅಧ್ಯಕ್ಷೆ ವೀಣಾ ಬಿರಾದಾರ ನೇಮಕ ಆದೇಶವನ್ನು ತಡೆಹಿಡಿಯಲಾಗಿದೆ.</p>.<p>‘ವೀಣಾ ಬಿರಾದಾರ ಅವರ ನೇಮಕ ಆದೇಶವನ್ನು ತಾಂತ್ರಿಕ ಕಾರಣಗಳಿಂದ ತಡೆ ಹಿಡಿಯಲಾಗಿದೆ. ಸಂಯೋಜಕ ಹುದ್ದೆಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನೇ ನೇಮಕ ಮಾಡುವಂತೆ ಕೆಲವರು ಮನವಿ ಸಲ್ಲಿಸಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಎ.ಎಂ.ಖಾನ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆ ತಾತ್ಕಾಲಿಕ ನೇಮಕಾತಿ ಆದೇಶವನ್ನು ವೀಣಾ ಬಿರಾದಾರ ಅವರಿಗೆ ನೀಡಲಾಗಿತ್ತು. ಕಾರ್ಯಭಾರ ಸ್ವೀಕರಿಸಿಲು ಅವರು ಜನವರಿ 20ರಂದು ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ನೇಮಕಾತಿ ಆದೇಶವನ್ನು ತಡೆಹಿಡಿಯಲಾಗಿದೆ’ ಎಂದು ವಿಶ್ವವಿದ್ಯಾಲಯದವರು ಅವರಿಗೆ ತಿಳಿಸಿದ್ದಾರೆ.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಅಧ್ಯಯನ ಪೀಠಗಳ ಸಂಯೋಜಕ, ನಿರ್ದೇಶಕ ಹುದ್ದೆಗಳಿಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನೇ ನೇಮಿಸಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಶಿಕ್ಷಕರ ಸಂಘ ಮತ್ತು ಕರ್ನಾಟಕ ವಿಶ್ವವಿದ್ಯಾಲಯ ಎಸ್ಸಿ, ಎಸ್ಟಿ ಸ್ನಾತಕೋತ್ತರ ಶಿಕ್ಷಕರ ಸಂಘದ ಅಧ್ಯಕ್ಷರುಗಳು ಕುಲಸಚಿವರಿಗೆ ಈಚೆಗೆ ಮನವಿ ಸಲ್ಲಿಸಿದ್ದಾರೆ.</p>.<p>‘ವಿಶ್ವವಿದ್ಯಾಲಯ ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಸಂದರ್ಶನ ನಡೆಸಿ ಆಯ್ಕೆ ಮಾಡಲಾಗಿತ್ತು’ ಎಂದು ಪ್ರಾಧ್ಯಾಪಕರೊಬ್ಬರು ತಿಳಿಸಿದರು. ಪ್ರೊ.ಸಿ.ಎಂ.ಕುಂದಗೋಳ ಅವರು ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆಗೆ ಈಚೆಗೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<h2>ಪಕ್ರಿಯೆ ಸ್ಥಗಿತಕ್ಕೆ ಅರವಿಂದ ಬೆಲ್ಲದ ಪತ್ರ</h2><p>ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಪೀಠದ ಸಲಹಾ ಸಮಿತಿ ಸದಸ್ಯರೂ ಆಗಿರುವ ಶಾಸಕ ಅರವಿಂದ ಬೆಲ್ಲದ ಅವರು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗೆ ಪತ್ರ ಬರೆದಿದ್ದಾರೆ.</p><p>ಪೀಠಕ್ಕೆ ಸಂಯೋಜಕರ ನೇಮಕಾತಿಗೆ ಮಾರ್ಗಸೂಚಿ ನಿಗದಿಪಡಿಸಬೇಕು. ಅರ್ಹತೆ, ಮಾನದಂಡ ನಿಗದಿ ಪಡಿಸುವವರೆಗೆ ಡೀನ್ ಅಥವಾ ಕುಲಸಚಿವರಿಗೆ ಆ ಹೊಣೆ ವಹಿಸಬಹುದು. ಅದನ್ನು ಬಿಟ್ಟು ಮಾನದಂಡ ನಿಗದಿಪಡಿಸದೆ ಬಸವ ಪೀಠ ಅಥವಾ ವಿಶ್ವವಿದ್ಯಾಲಯದ ಯಾವುದೇ ಪೀಠಕ್ಕೆ ಯಾರನ್ನಾದರೂ ನೇಮಿಸಿದರೆ ಅಪವಾದಕ್ಕೆ ಕಾರಣವಾಗುತ್ತದೆ. ಮಾನದಂಡ ಸಿದ್ಧಪಡಿಸಿದ ನಂತರ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕರ್ನಾಟಕ ವಿಶ್ವವಿದ್ಯಾಲಯ ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆಗೆ (ತಾತ್ಕಾಲಿಕ ನೇಮಕಾತಿ) ಸಾಯಿ ಪಿಯು ಕಾಲೇಜಿನ ಅಧ್ಯಕ್ಷೆ ವೀಣಾ ಬಿರಾದಾರ ನೇಮಕ ಆದೇಶವನ್ನು ತಡೆಹಿಡಿಯಲಾಗಿದೆ.</p>.<p>‘ವೀಣಾ ಬಿರಾದಾರ ಅವರ ನೇಮಕ ಆದೇಶವನ್ನು ತಾಂತ್ರಿಕ ಕಾರಣಗಳಿಂದ ತಡೆ ಹಿಡಿಯಲಾಗಿದೆ. ಸಂಯೋಜಕ ಹುದ್ದೆಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನೇ ನೇಮಕ ಮಾಡುವಂತೆ ಕೆಲವರು ಮನವಿ ಸಲ್ಲಿಸಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಎ.ಎಂ.ಖಾನ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆ ತಾತ್ಕಾಲಿಕ ನೇಮಕಾತಿ ಆದೇಶವನ್ನು ವೀಣಾ ಬಿರಾದಾರ ಅವರಿಗೆ ನೀಡಲಾಗಿತ್ತು. ಕಾರ್ಯಭಾರ ಸ್ವೀಕರಿಸಿಲು ಅವರು ಜನವರಿ 20ರಂದು ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ನೇಮಕಾತಿ ಆದೇಶವನ್ನು ತಡೆಹಿಡಿಯಲಾಗಿದೆ’ ಎಂದು ವಿಶ್ವವಿದ್ಯಾಲಯದವರು ಅವರಿಗೆ ತಿಳಿಸಿದ್ದಾರೆ.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಅಧ್ಯಯನ ಪೀಠಗಳ ಸಂಯೋಜಕ, ನಿರ್ದೇಶಕ ಹುದ್ದೆಗಳಿಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನೇ ನೇಮಿಸಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಶಿಕ್ಷಕರ ಸಂಘ ಮತ್ತು ಕರ್ನಾಟಕ ವಿಶ್ವವಿದ್ಯಾಲಯ ಎಸ್ಸಿ, ಎಸ್ಟಿ ಸ್ನಾತಕೋತ್ತರ ಶಿಕ್ಷಕರ ಸಂಘದ ಅಧ್ಯಕ್ಷರುಗಳು ಕುಲಸಚಿವರಿಗೆ ಈಚೆಗೆ ಮನವಿ ಸಲ್ಲಿಸಿದ್ದಾರೆ.</p>.<p>‘ವಿಶ್ವವಿದ್ಯಾಲಯ ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಸಂದರ್ಶನ ನಡೆಸಿ ಆಯ್ಕೆ ಮಾಡಲಾಗಿತ್ತು’ ಎಂದು ಪ್ರಾಧ್ಯಾಪಕರೊಬ್ಬರು ತಿಳಿಸಿದರು. ಪ್ರೊ.ಸಿ.ಎಂ.ಕುಂದಗೋಳ ಅವರು ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆಗೆ ಈಚೆಗೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<h2>ಪಕ್ರಿಯೆ ಸ್ಥಗಿತಕ್ಕೆ ಅರವಿಂದ ಬೆಲ್ಲದ ಪತ್ರ</h2><p>ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಹುದ್ದೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಪೀಠದ ಸಲಹಾ ಸಮಿತಿ ಸದಸ್ಯರೂ ಆಗಿರುವ ಶಾಸಕ ಅರವಿಂದ ಬೆಲ್ಲದ ಅವರು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗೆ ಪತ್ರ ಬರೆದಿದ್ದಾರೆ.</p><p>ಪೀಠಕ್ಕೆ ಸಂಯೋಜಕರ ನೇಮಕಾತಿಗೆ ಮಾರ್ಗಸೂಚಿ ನಿಗದಿಪಡಿಸಬೇಕು. ಅರ್ಹತೆ, ಮಾನದಂಡ ನಿಗದಿ ಪಡಿಸುವವರೆಗೆ ಡೀನ್ ಅಥವಾ ಕುಲಸಚಿವರಿಗೆ ಆ ಹೊಣೆ ವಹಿಸಬಹುದು. ಅದನ್ನು ಬಿಟ್ಟು ಮಾನದಂಡ ನಿಗದಿಪಡಿಸದೆ ಬಸವ ಪೀಠ ಅಥವಾ ವಿಶ್ವವಿದ್ಯಾಲಯದ ಯಾವುದೇ ಪೀಠಕ್ಕೆ ಯಾರನ್ನಾದರೂ ನೇಮಿಸಿದರೆ ಅಪವಾದಕ್ಕೆ ಕಾರಣವಾಗುತ್ತದೆ. ಮಾನದಂಡ ಸಿದ್ಧಪಡಿಸಿದ ನಂತರ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>