ಇದುವರೆಗೆ ಎಸ್ಡಿಎಂ ಆವರಣದಿಂದ ಹೊರಗೆ ಎಲ್ಲಿಯೂ ಪ್ರಕರಣಗಳೂ ವರದಿಯಾಗಿಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರ ಹಾಗೂ ಜಿಲ್ಲೆಯ ಸಾರ್ವಜನಿಕರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಸ್ವ್ಯಾಬ್ ನೀಡಿ, ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕೆ ಈ ಮುನ್ನೆಚ್ಚರಿಕೆಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.