<p>ಹುಬ್ಬಳ್ಳಿ: ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಅಹಿಂದ ಸಮುದಾಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ ಅಧ್ಯಕ್ಷ ಸಿದ್ದಣ್ಣ ತೇಜಿ ಹೆಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ 80ರಷ್ಟು ಅಹಿಂದ ವರ್ಗ ಪಕ್ಷಾತೀತವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ಹೀಗಾಗಿ ಮುಸ್ಲಿಂ, ಕುರುಬ, ಪರಿಶಿಷ್ಟ ಜಾತಿ ಮತ್ತು ಪರಿಶಿಕ್ಷಣ ಸಮುದಾಯಗಳಿಗೆ ತಲಾ ಒಂದೊಂದು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂದರು.</p>.<p>ಅಹಿಂದ ಸಮುದಾಯಗಳಿಗೆ 20ರಿಂದ 22 ಸಚಿವ ಸ್ಥಾನ ನೀಡಬೇಕು. ಈ ಬಗ್ಗೆ ಕಾಂಗ್ರೆಸ್ ವರಿಷ್ಠರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ ಎಂದು ಹೇಳಿದರು.</p>.<p>ಮುಖ್ಯಮಂತ್ರಿ ಪುತ್ರನಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಅದು ಕುಟುಂಬ ರಾಜಕಾರಣವಾಗುತ್ತದೆ. ಅದರ ಬದಲು ಕುರುಬ ಸಮಾಜದ ರಾಘವೇಂದ್ರ ಹಿಟ್ನಾಳ ಅಥವಾ ಬಸವರಾಜ ಶಿವಣ್ಣವರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಅಹಿಂದ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡದಿದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗುತ್ತದೆ. ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಹೆಚ್ಚಿನ ಆದ್ಯತೆ ನೀಡದಿದ್ದರೆ ಜೂನ್ 7ರಂದು ಬೆಂಗಳೂರಿನಲ್ಲಿ ಅಹಿಂದ ಸಂಘಟನೆಗಳ ಸಭೆ ನಡೆಸಿ, ಮುಂದಿನ ಹೋರಾಟದ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.</p>.<p>ಸುಜಾತಾ ಸನದಿ, ಕೆ.ಎಫ್.ಇಬ್ರಾಹಿಂಪುರ, ಹನುಮಂತಪ್ಪ ಕೌಜಗೇರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-22-848535189</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಅಹಿಂದ ಸಮುದಾಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ ಅಧ್ಯಕ್ಷ ಸಿದ್ದಣ್ಣ ತೇಜಿ ಹೆಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ 80ರಷ್ಟು ಅಹಿಂದ ವರ್ಗ ಪಕ್ಷಾತೀತವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ಹೀಗಾಗಿ ಮುಸ್ಲಿಂ, ಕುರುಬ, ಪರಿಶಿಷ್ಟ ಜಾತಿ ಮತ್ತು ಪರಿಶಿಕ್ಷಣ ಸಮುದಾಯಗಳಿಗೆ ತಲಾ ಒಂದೊಂದು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂದರು.</p>.<p>ಅಹಿಂದ ಸಮುದಾಯಗಳಿಗೆ 20ರಿಂದ 22 ಸಚಿವ ಸ್ಥಾನ ನೀಡಬೇಕು. ಈ ಬಗ್ಗೆ ಕಾಂಗ್ರೆಸ್ ವರಿಷ್ಠರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ ಎಂದು ಹೇಳಿದರು.</p>.<p>ಮುಖ್ಯಮಂತ್ರಿ ಪುತ್ರನಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಅದು ಕುಟುಂಬ ರಾಜಕಾರಣವಾಗುತ್ತದೆ. ಅದರ ಬದಲು ಕುರುಬ ಸಮಾಜದ ರಾಘವೇಂದ್ರ ಹಿಟ್ನಾಳ ಅಥವಾ ಬಸವರಾಜ ಶಿವಣ್ಣವರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಅಹಿಂದ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡದಿದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗುತ್ತದೆ. ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಹೆಚ್ಚಿನ ಆದ್ಯತೆ ನೀಡದಿದ್ದರೆ ಜೂನ್ 7ರಂದು ಬೆಂಗಳೂರಿನಲ್ಲಿ ಅಹಿಂದ ಸಂಘಟನೆಗಳ ಸಭೆ ನಡೆಸಿ, ಮುಂದಿನ ಹೋರಾಟದ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.</p>.<p>ಸುಜಾತಾ ಸನದಿ, ಕೆ.ಎಫ್.ಇಬ್ರಾಹಿಂಪುರ, ಹನುಮಂತಪ್ಪ ಕೌಜಗೇರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-22-848535189</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>